Wednesday, February 12, 2025

ಮಾಣಿಯಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ: ಕಂಗಾಲಾದ ಗ್ರಾಹಕರು

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ವಿದ್ಯುತ್ ಪವರ್ ಕಟ್, ವಯರ್ ಕಟ್ ಆದ್ರೆ ವಿದ್ಯುತ್ ಪೂರೈಕೆ ಜೊತೆಯಲ್ಲಿ ಬಿ.ಎಸ್.ಎನ್.ಎಲ್ ಮೊಬೈಲ್ ನೆಟ್ವರ್ಕ್ ಕೂಡ ಇರುವುದಿಲ್ಲ. ಇದಕ್ಕೆ ದೂರವಾಣಿ ಕೇಂದ್ರದ ಜನರೇಟರ್ ವ್ಯವಸ್ತೆ ಸರಿ ಇಲ್ಲ, ಉದ್ಯಮದ ನಷ್ಟ,ಖಾಸಗಿ ರಂಗದ ಸ್ಪರ್ದೆ ,ಸಿಬ್ಬಂದಿ ಕೊರತೆ ನಾನಾ ಕಾರಣ ಇರಬಹುದು. ಇದರಿಂದ ಗ್ರಾಹಕರಿಗೆ ತುಂಬಾ ತೊಂದರೆ ಆಗಿದೆ. ಇದರಿಂದ ಬೇಸತ್ತ ಕೆಲವು ಹಾಲಿ ಬಿ.ಎಸ್.ಎನ್.ಎಲ್ ಗ್ರಾಹಕರು ಇನ್ನಿತರ ಮೊಬೈಲ್ ನೆಟ್ವರ್ಕ್ ಕಂಪೆನಿಗಳಾದ ಐಡಿಯಾ, ಜಿಯೋ, ಏರ್ಟೆಲ್ ನತ್ತ ತಮ್ಮ ಬಿ.ಎಸ್.ಎನ್.ಎಲ್ ನಂಬರನ್ನು ಪೋರ್ಟೆಬಿಲಿಟಿ ಮಾಡುವತ್ತ ಮನಸ್ಸು ಮಾಡುತ್ತಿದ್ದಾರೆ. ಇನ್ನಾದರೂ ಬಿ.ಎಸ್.ಎನ್.ಎಲ್ ಈ ಸಮಸ್ಯೆ ಪರಿಹರಿಸದಿದ್ದರೆ ತನ್ನ ಕೆಟ್ಟ ಸೇವೆಯಿಂದ ಗ್ರಾಹಕರನ್ನು ಕಳೆದುಕೊಳ್ಳುವ ಸನ್ನಿವೇಶ ಮುಂದಿನ ದಿನಗಳಲ್ಲಿ ದಟ್ಟವಾಗಿದೆ. ಇನ್ನಾದರು ಸಂಬಂಧ ಪಟ್ಟವರು ಎಚ್ಚೆತ್ತುಕೊಳ್ಳಲಿ ಎಂದು ಆಶಿಸೋಣ.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...