Monday, January 26, 2026

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ
ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ.

ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅನರ್ಹ ಮತದಾರರನ್ನು ಬಳಸಿ, ಉಚ್ಚ ನ್ಯಾಯಲಯದಲ್ಲಿ ಸುಳ್ಳು ದಾಖಲೆಗಳನ್ನು ಮತ್ತು ಮಾಹಿತಿಗಳನ್ನು ನೀಡಿ ಅನರ್ಹ ಮತದಾರರಿಗೆ ಮತದಾನದ ಹಕ್ಕನ್ನು ಪಡೆದು ಮತ ಚಲಾಯಿಸಿರುತ್ತಾರೆ.
ಈ ಮಧ್ಯಂತರ ಆದೇಶದ ವಿರುದ್ಧ ಬಿ.ಜೆ.ಪಿ ಬೆಂಬಲಿತ ನಿರ್ದೇಶಕರು ಈ ರಿಟ್ ಅರ್ಜಿಯನ್ನು ಸಲ್ಲಿಸಿದ್ದು, ಇದಕ್ಕೆ ಪೂರಕವಾದ ಎಲ್ಲಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಯಾವುದೇ ಕಾರಣಕ್ಕೂ ಅನರ್ಹ ಮತದಾರರಿಗೆ ನೀಡಿರುವ ಮತವನ್ನು ಚುನಾವಣಾ ಫಲಿತಾಂಶದಲ್ಲಿ ಪರಿಗಣಿಸಬಾರದು ಎಂದು ಪ್ರಬಲ ವಾದ ಮಂಡಿಸಲಾಗಿತ್ತು.
ಎರಡೂ ಅರ್ಜಿದಾರರ ವಾದ ,ವಿವಾದವನ್ನು
ಅಲಿಸಿದ ಉಚ್ಚ ನ್ಯಾಯಲಯವು ಕಾಂಗ್ರೆಸ್ ಬೆಂಬಲಿತರ ಪರ ವಾದವನ್ನು ತಳ್ಳಿ ಹಾಕಿ ಇತಿಹಾಸದಲ್ಲಿಯೇ ಮೊದಲ ಬಾರಿಗೆಂಬಂತೆ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಎಣಿಕೆಯ ಸಂದರ್ಭದಲ್ಲಿ ಪರಿಗಣಿಸಬಾರದು ಎಂದು ಐತಿಹಾಸಿಕ ತೀರ್ಪನ್ನು ನೀಡಿರುತ್ತದೆ.
ಉಚ್ಚ ನ್ಯಾಯಾಲಯದ ಈ ಆದೇಶ ಎಲ್ಲಾ ಅನರ್ಹ ಮತದಾರರಿಗೆ ಎಚ್ಚರಿಕೆಯ ಗಂಟೆಯಾಗಿದೆ ಎಂದೇ ಪರಿಗಣಿಸಲಾಗಿದ್ದು, ಯಾವುದೇ ಅರ್ಹತೆ ಇಲ್ಲದೆ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತು ಚುನಾವಣೆಯಲ್ಲಿ ಪೌತಿತ್ವತೆಯನ್ನು ಹಾಳು ಮಾಡುವ ಉದ್ದೇಶದಿಂದ ಕಾನೂನು ಬಾಹಿರವಾಗಿ ಮತದಾನದ ಹಕ್ಕು ತಡೆದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ತೀವ್ರ ಮುಖಭಂಗವಾಗಿರುತ್ತದೆ ಎಂದು ಬಿಜೆಪಿ ಬೆಂಬಲಿತರು ಅಭಿಪ್ರಾಯ ಪಟ್ಟಿದ್ದಾರೆ.
ಬಿ.ಜೆ.ಪಿ ಬೆಂಬಲಿತರ ಪರವಾಗಿ ಉಚ್ಚ ನ್ಯಾಯಾಲಯದಲ್ಲಿ ವಕೀಲರಾದ ದೇವಿ ಪ್ರಸಾದ್ ಶೆಟ್ಟಿ ವಾದಿಸಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...