Wednesday, February 12, 2025

ಫೆ.21, ಶುಕ್ರವಾರ: ಈಶ್ವರಮಂಗಲದ ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪೂಜಾ ಉತ್ಸವ

ಬಂಟ್ವಾಳ: ಸಜೀಪಮೂಡ ಗ್ರಾಮ ಈಶ್ವರಮಂಗಲದ ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಅಂಗವಾಗಿ ಪೂಜಾ ಉತ್ಸವ ಜರಗಲಿದೆ. ವರ್ಷಂಪ್ರತಿಯಂತೆ ಮಹಾಶಿವರಾತ್ರಿ ಪೂಜೆಯ ಅಂಗವಾಗಿ ಫೆ.21 ಶುಕ್ರವಾರದಂದು ಬೆಳಿಗ್ಗೆ ಶ್ರೀದೇವರಿಗೆ ಫಲಪಂಚಾಮೃತ, ಅಭಿಷೇಕ ಕಲ್ಪೋಕ್ತ ಪೂಜೆ, ಪ್ರಸನ್ನ ಪೂಜೆ, ಮಹಾಮಂಗಳಾರತಿ, ರುದ್ರಾಭಿಷೇಕದೊಂದಿಗೆ ವಿಶೇಷ ಪೂಜೆ ಜರಗಲಿದೆ. ಬೆಳಿಗ್ಗೆ 9 ಗಂಟೆಯಿಂದ ಬಂಟ್ವಾಳ ಅಂಗಸಂಸ್ಥೆ ಮಹಿಳಾ ವೇದಿಕೆಯ ಕೂಟ ಮಹಾಜಗತ್ತು ಇವರಿಂದ ಹಾಗೂ ಶ್ರೀ ಶರಭೇಶ್ವರ ಮತ್ತು ಶಿವರಂಜನಿ ಕಲಾಕೇಂದ್ರ ಬೊಕ್ಕಸ ಸಜಿಪಮುನ್ನೂರು ನಾಮ ಸಂಕೀರ್ತನ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2.30ರಿಂದ ಮುಡಿಪು ದಕ್ಷಾಧ್ವರ ವಿಶ್ವಭಾರತಿ ಯಕ್ಷ ಸಂಜೀವಿನಿ ರಿಜಿಸ್ಟರ್ಡ್ ಇವರಿಂದ ಯಕ್ಷಗಾನ ತಾಳಮದ್ದಳೆ ಜರಗಲಿದೆ. ಸಂಜೆ ೭ಗಂಟೆಯಿಂದ ಕುಕ್ಕುದಕಟ್ಟೆ ಶ್ರೀರಾಮ ಹಿಂದೂ ಸಂಸ್ಕೃತಿ ಮಂದಿರ, ಈಶ್ವರಮಂಗಳ ಶ್ರೀ ಸದಾಶಿವ ಬಾಲಗಣಪತಿ ಭಜನಾ ಮಂಡಳಿ, ಬೆಂಕ್ಯ ಅನ್ನಪ್ಪ ಡಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಸಜಿಪಮೂಡ ಶ್ರೀ ಶಾರದಾ ಅಂಬಿಕಾ ಭಜನಾ ಮಂದಿರ ಶಾರದಾ ನಗರ ಇವರುಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ನಂತರ ರಂಗ ಪೂಜೆ ಮಹಾಪೂಜೆ ಅನ್ನಸಂತರ್ಪಣೆ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದೆ.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...