Tuesday, January 27, 2026

ಇಂದು ಮಹಾವೀರ ಜಯಂತಿ ಆಚರಣೆ

ಖ್ಯಾತ ಚಿತ್ರ ಕಲಾವಿದರಾಗಿದ್ದ ಅಂದಿನ ಧರ್ಮಸ್ಥಳದ ಧರ್ಮಾಧಿಕಾರಿ ಕೀರ್ತಿಶೇಷ ಮಂಜಯ್ಯ ಹೆಗ್ಗಡೆಯವರು ರಚಿಸಿದ ಭಗವಾನ್ ಶ್ರೀ ಮಹಾವೀರತೀರ್ಥಂಕರರ ವರ್ಣಚಿತ್ರ

ಉಜಿರೆ: ಭಗವಾನ್‌ಶ್ರೀ ಮಹಾವೀರ ಸ್ವಾಮಿಯ 2618ನೆ ಜಯಂತ್ಯುತ್ಸವವನ್ನು ಬುಧವಾರ ದೇಶದೆಲ್ಲೆಡೆ ಜಿನ ಮಂದಿರ (ಬಸದಿ)ಗಳಲ್ಲಿ ಸಂಭ್ರಮ – ಸಡಗರದಿಂದ ಆಚರಿಸಲಾಗುವುದು.
ವಿಶೇಷ ಪೂಜೆ, ಅಭಿಷೇಕ, ಆರಾಧನೆ, ಮುನಿಗಳಿಂದ ಹಾಗೂ ಭಟ್ಟಾರಕರುಗಳಿಂದ ಮಂಗಲ ಪ್ರವಚನ, ಧಾರ್ಮಿಕಚಿಂತನ-ಮಂಥನ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಬೆಳ್ತಂಗಡಿ ಜೈನ ಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಬುಧವಾರ ಬೆಳಿಗ್ಗೆ ಗಂಟೆ 6.30 ರಿಂದ ತೋರಣ ಮುಹೂರ್ತ, ವಿಮಾನ ಶುದ್ಧಿ, ಸಾಮೂಹಿಕ ಶ್ರೀ ಸಮ್ಮೇದಗಿರಿ ಸಿದ್ದಕ್ಷೇತ್ರ ಆರಾಧನೆ ಹಾಗೂ ಭಗವಾನ್ ಶ್ರೀ ಮಹಾವೀರ ಸ್ವಾಮಿಗೆ ನವಕಲಶ ಅಭಿಷೇಕ ನಡೆಯುತ್ತದೆ ಎಂದು ಬಸದಿಯ ಆಡಳಿತ ಮೊಕ್ತೇಸರ ಕೆ.ಜಯವರ್ಮರಾಜ ಬಳ್ಳಾಲ್ ತಿಳಿಸಿದ್ದಾರೆ.
ಹೊಂಬುಜಜೈನ ಮಠದ ಪೂಜ್ಯ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು.
ನಾರಾವಿಯಲ್ಲಿ ಭಗವಾನ್ ಶ್ರೀ ಧರ್ಮನಾಥ ಸ್ವಾಮಿ ಬಸದಿಯಲ್ಲಿ, ವೇಣೂರು ಬಸದಿಯಲ್ಲಿ ಹಾಗೂ ಮೂಡಬಿದ್ರೆ ಮತ್ತು ಕಾರ್ಕಳ ಬಸದಿಗಳಲ್ಲಿಯೂ ವಿಶೇಷ ಪೂಜೆ, ಆರಾಧನೆಗಳು ನಡೆಯುತ್ತವೆ.
ಭಗವಾನ್ ಮಹಾವೀರರು ಭೋದಿಸಿದ ಅಹಿಂಸೆ, ಸ್ಯಾದ್ವಾದ, ಬದುಕು ಮತ್ತು ಬದುಕಲು ಬಿಡು, ಪಂಚಾಣುವ್ರತಗಳು ಸಾರ್ವಕಾಲಿಕ ಮೌಲ್ಯ ಹೊಂದಿವೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...