Wednesday, July 9, 2025

ಯೇನೆಪೋಯ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ: ಮಾಹಿತಿ-ಸಂವಾದ

ಮಂಗಳೂರು: ವೈದ್ಯಕೀಯ ಲೋಕಕ್ಕೆ ಸವಾಲು ಎನ್ನುವಂತೆ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಒಂದುಸಾವಿರ ವ್ಯಕ್ತಿಗಳಲ್ಲಿ ಐದು ಜನರು  ಕ್ಯಾನ್ಸರ್ ಗೆ ತುತ್ತಾಗುತ್ತಿದ್ದಾರೆ,  ಜೀವನ ಶೈಲಿಯನ್ನು ಉತ್ತಮ ಪಡಿಸಿಕೊಳ್ಳುವುದೇ ನಿಜವಾದ ಕ್ಯಾನ್ಸರ್ ಜಾಗೃತಿ ಎಂದು ಮಂಗಳೂರಿನ ಕ್ಯಾನ್ಸರ್ ತಜ್ಞ  ಡಾ. ಗುರುಪ್ರಸಾದ್ ಭಟ್ ಹೇಳಿದರು.
ಮಂಗಳೂರು ಕೊಡಿಯಾಲ್ ಬೈಲಿನಲ್ಲಿರುವ ಯೇನಪೋಯ ಸ್ಪೆಷಾಲಿಟಿ ಆಸ್ಪತ್ರೆಯ ಕಾನ್ಪರೆನ್ಸ್ ಹಾಲ್ ನಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ  ಸೋಮವಾರ ಸಂಜೆ ನಡೆದ “ಶೀಘ್ರ ಕ್ಯಾನ್ಸರ್ ಪತ್ತೆ ಹಚ್ಚುವುದು ಹೇಗೆ “ ಎನ್ನುವ ವಿಷಯದ ಕುರಿತು ಉಪನ್ಯಾಸ ನೀಡಿದರು.
ಸ್ತನ, ಗಂಟಲು ಹಾಗೂ ಬಾಯಿಯ ಕ್ಯಾನ್ಸರ್ ಭಾರತದಲ್ಲಿ ಅತೀ ಹೆಚ್ಚು ಜನರನ್ನು ಕಾಡುತ್ತಿದೆ. ನಮ್ಮ ಸೇವನೆಯ ಆಹಾರ, ಪರಿಸರದ ಮೇಲೆ ಗಮನ ನೀಡುವುದು, ದೈನಂದಿನ ಕಾರ್ಯಗಳಿಗೆ ಬಳಸುವ ವಸ್ತುಗಳ ಕಡೆಗೆ ಹೆಚ್ಚಿನ ನಿಗಾವಹಿಸುವ ಮೂಲಕ ಜೀವನ ಶೈಲಿಯಲ್ಲಿ ಪ್ರತಿಯೊಬ್ಬರೂ ಸುಧಾರಣೆ ತರಬೇಕಾದ್ದು ಇಂದಿನ ಅಗತ್ಯ ಎಂದ ಅವರು, ಕ್ಯಾನ್ಸರ್ ಗೆ ಮದ್ದೇ ಇಲ್ಲ ಎನ್ನುವ ಕಾಲವೊಂದಿತ್ತು, ಆದರೆ ಈಗ ಹಾಗಿಲ್ಲ ಮೊದಲಹಂತದಲ್ಲೇ ಪತ್ತೆಯಾಗಿ ಚಿಕಿತ್ಸೆ ನೀಡಿದರೆ ಕ್ಯಾನ್ಸರ್ ಎಂಬ ಗುಮ್ಮವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಾಧ್ಯವಿದೆ ಎಂದರು.
ಯಾವುದೇ ವ್ಯಕ್ತಿಗೆ ಕ್ಯಾನ್ಸರ್ ಇದೆ ಎಂಬುದು ಖಚಿತವಾದರೆ ಅದನ್ನು  ಚುಚ್ಚುಮದ್ದು, ಶಸ್ತ್ರ ಚಿಕಿತ್ಸೆ, ಕೆಮೋಥೆರಪಿ  ಮತ್ತು ರೆಡಿಯೋ ಥೆರಪಿ  ಮೂಲಕ ಉತ್ತಮ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ. ಸಂಶೋಧನೆಯ ವಲಯ ಸಾಕಷ್ಟು ಅಭಿವೃದ್ಧಿ ಹೊಂದುತ್ತಿದ್ದು,  ವಿವಿಧ ರೀತಿಯ ಕ್ಯಾನ್ಸರ್ ಗಳಿಗೆ ಅದರದೇ ಆದ ವಿಶೇಷ ಚಿಕಿತ್ಸೆಗಳು ಲಭ್ಯವಿದೆ ಎಂದ ಅವರು, ಜನಜಾಗೃತಿಯೊಂದೇ ಕ್ಯಾನ್ಸರ್ ಗೆ ನಿಜವಾದ ಮದ್ದು ಎಂದು ಅಭಿಪ್ರಾಯಿಸಿದರು.
ಕ್ಯಾನ್ಸರ್ ಗೆಡ್ಡೆಯಲ್ಲಿನ ನಿರ್ದಿಷ್ಟ ಕೋಶಗಳನ್ನು ಗುರುತಿಸಿ, ನಿಶ್ಚಿತ ಔಷಧೋಪಚಾರ ಮಾಡುವ,  ಕ್ಯಾನ್ಸರ್ ರೋಗದ ಲಕ್ಷಣ ಕಾಣಿಸಿದ ನಂತರ ಬಹುತೇಕ ರೋಗಿಗಳು ಕಾಯಿಲೆ ಯಾವ ಹಂತದಲ್ಲಿದೆ ಎಂದು ಅರಿತು,ಮುಂಬರುವ ದುಷ್ಪರಿಣಾಮಗಳ ಬಗ್ಗೆ ಪೂರ್ವದಲ್ಲೇ ಗ್ರಹಿಸಿ ಸೂಕ್ತ ಚಿಕಿತ್ಸೆ ಮಾಡುವುದು ಈಗಿನ ಹೊಸ ಸಂಶೋಧನೆಯಾಗಿದ್ದು, ಕ್ಯಾನ್ಸರ್ ಸಹಿತ ಯಾವುದೇ ರೋಗಗಳ ಬಗ್ಗೆ ನಿರ್ಲಕ್ಷ್ಯ ಸಲ್ಲದು ಎಂದರು.
  ಯೇನಪೋಯ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಮಹಮ್ಮದ್ ತಾಹಿರ್ ಸ್ವಾಗತಿಸಿದರು , ಸಂಪರ್ಕ ಅಧಿಕಾರಿ ಶಾನ್ ಅಕ್ಷಯ್ ವಂದಿಸಿದರು.
ಫಿಸಿಯೋತೆರಪಿ ವಿಭಾಗದ ನೋಡಲ್ ಅಧಿಕಾರಿ ಡಾ.ರಮ್ಯ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸದ ಬಳಿಕ ಸಂವಾದ ಕಾರ್ಯಕ್ರಮ ನಡೆಯಿತು.

More from the blog

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...