Friday, June 27, 2025

ಡಿ. 23ರಂದು ಸಂಗಬೆಟ್ಟುನಲ್ಲಿ ಕ್ರೀಡೋತ್ಸವ

ಬಂಟ್ವಾಳ: ಪದ್ಮಶಾಲಿ ದ.ಕ.ಜಿಲ್ಲಾ ಮಹಾಸಭಾ ವತಿಯಿಂದ 27ನೇ ಪದ್ಮಶಾಲಿ ಅವಿಭಜಿತ ಜಿಲ್ಲಾ ಮಟ್ಟದ ಕ್ರೀಡೋತ್ಸವ ಬಂಟ್ವಾಳ ತಾಲೂಕು ಸಂಗಬೆಟ್ಟು ಶ್ರೀ ವೀರಭದ್ರ ಸ್ವಾಮೀ ಮಹಮ್ಮಾಯಿ ದೇವಸ್ಥಾನದ ಮೈದಾನದಲ್ಲಿ ಡಿ. 23ರಂದು ಜರಗಲಿದೆ.
ದ.ಕ. ಜಿಲ್ಲಾ ಪದ್ಮಶಾಲಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಂ.ಜಯರಾಂ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ದುರ್ಗಾಪರಮೇಶ್ವರಿ ದೇವಸ್ಥಾನ ಆಡಳಿತ ಮೊಕ್ತೇಸರ ಸಿ. ಪುರುಷೋತ್ತಮ ಶೆಟ್ಟಿಗಾರ್ ಕ್ರೀಡಾಕೂಟವನ್ನು ಉದ್ಘಾಟಿಸಲಿರುವರು. ಜಿಲ್ಲಾ ಪದ್ಮಶಾಲಿ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ ಎಸ್. ಸದಾನಂದ ಶೆಟ್ಟಿಗಾರ್ ಅವರು ಧ್ವಜಾರೋಹಣ ನಡೆಸಲಿರುವರು. ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಎಸ್. ಶ್ರೀನಿವಾಸ್ ಶೆಟ್ಟಿಗಾರ್ ಮಂಗಳೂರು ಕ್ರೀಡಾಜ್ಯೋತಿಯನ್ನು ಹಸ್ತಾಂತರಿಸಲಿರುವರು. ಜಿಲ್ಲಾ ಪದ್ಮಶಾಲಿ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ ಪಿ. ಪ್ರಭಾಕರ ಉಡುಪಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಿರುವರು.
ಸಂಜೆ ಸಮಾರೋಪದಲ್ಲಿ ಉಡುಪಿ ಜಿಲ್ಲಾ ಪದ್ಮಶಾಲಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಓಂಪ್ರಕಾಶ್ ಡಿ. ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಲಿರುವರು. ಉದ್ಯಮಿ ಮೋಹನ್ ಶೆಟ್ಟಿಗಾರ್ ಉಜಿರೆ ಮತ್ತು ಪ್ರಗತಿಪರ ಕೃಷಿಕ ಜಿ.ಆರ್. ಚಿತ್ತರಂಜನ್ ಬಹುಮಾನ ವಿತರಿಸಲಿರುವರು. ಮಾಜಿ ಅಧ್ಯಕ್ಷ ಗಿರೀಶ್ ಶೆಟ್ಟಿಗಾರ್ ವಿಟ್ಲ ಸಮಾರೋಪ ಭಾಷಣ ಮಾಡಲಿರುವರು. ಈ ಸಂದರ್ಭದಲ್ಲಿ ಸಾಧಕರನ್ನು ಸಮ್ಮಾನಿಸಲಾಗುವುದು ಎಂದು ಸಮಿತಿ ಪ್ರಕಟನೆ ತಿಳಿಸಿದೆ.

More from the blog

Kempegowda Jayanti : ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ..

ಬಂಟ್ವಾಳ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತಹಶಿಲ್ದಾರ್ ಅರ್ಚನಾ ಭಟ್ ಮಾತನಾಡಿ, ದೂರದೃಷ್ಟಿಯ ಚಿಂತನೆಯ ವ್ಯಕ್ತಿಯಾಗಿದ್ದ...

ವಿಟ್ಲ: ಪ್ಲಾಸ್ಟಿಕ್ ಜಾಗೃತಿ ಕಾರ್ಯಕ್ರಮ..

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ವಿಟ್ಲ ವರ್ತಕರ ಸಂಘದಿಂದ ತಯಾರಿಸಲಾದ ಪ್ಲಾಸ್ಟಿಕ್ ನಿಷೇಧದ ಸ್ಟಿಕ್ಕರ್ ನ್ನು ವರ್ತಕರ ಸಂಘದ ಸಹಕಾರದೊಂದಿಗೆ ವಿಟ್ಲ ಪೇಟೆಯ...

Installation Ceremony : ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ..

ಬಂಟ್ವಾಳ : ವಕೀಲರ ಸಂಘ (ರಿ ) ಬಂಟ್ವಾಳ ಇದರ 2025-2027 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜೂ.26 ರಂದು ಪ್ರಧಾನ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ...

ಸತತ 3ನೇ ಬಾರಿಗೆ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಕೀರ್ತಿ ಆಯ್ಕೆ..

ವಿಟ್ಲ : ವಿಟ್ಲ ಪಡೂರು ಗ್ರಾಮದ ಕುಕ್ಕಿಲ ಮನೆ ಶ್ರೀಮತಿ ವನಿತಾ ಲಕ್ಷ್ಮಣ ಗೌಡ ದಂಪತಿಯ ಪುತ್ರಿ ಕೀರ್ತಿ ಇವರು ಸತತ 3ನೇ ಬಾರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಮಾದರಿ ಹಿರಿಯ ಪ್ರಾಥಮಿಕ...