Wednesday, February 12, 2025

ಜ.20 ವಿಠಲ ವಿದ್ಯಾ ಸಂಘ ಹಳೆ ವಿದ್ಯಾರ್ಥಿಗಳ ಸಕುಟುಂಬ ಸ್ನೇಹಮಿಲನ

ವಿಟ್ಲ: ವಿಟ್ಲದ ವಿಠಲ ವಿದ್ಯಾ ಸಂಘದ ಹಿರಿಯ ವಿದ್ಯಾರ್ಥಿಗಳನ್ನು ಒಂದೇ ಸೂರಿನಡಿ ಸೇರಿಸಿ ಸಕುಟುಂಬ ಸ್ನೇಹಮಿಲನ-2019 ಕಾರ್ಯಕ್ರಮ ಜ.20ರಂದು ಬೆಳಗ್ಗೆ ನಡೆಯಲಿದೆ ಎಂದು ವಿಠಲ ವಿದ್ಯಾ ಸಂಘದ ಸಂಚಾಲಕ ಎಲ್.ಎನ್ ಕೂಡೂರು ತಿಳಿಸಿದರು.
ಅವರು ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ಕಾರ್ಯಕ್ರಮದಲ್ಲಿ ವಿಠಲ ಪ್ರೌಢ ಶಾಲೆ, ವಿಠಲ ಪದವಿಪೂರ್ವ ಕಾಲೇಜು, ವಿಠಲ ಸುಪ್ರಜಿತ್ ಐಟಿಐ ನ ಹಿರಿಯ ವಿದ್ಯಾರ್ಥಿಗಳು, ತಮ್ಮ ಬದುಕು ರೂಪಿಸಿದ ನಿವೃತ್ತ ಶಿಕ್ಷಕ, ಶಿಕ್ಷಕೇತರ ಉಪಸ್ಥಿತಿಯಲ್ಲಿ ಒಂದು ದಿನದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ವಿಟ್ಲ ಅರಮನೆಯ ರವಿವರ್ಮ ಕೃಷ್ಣರಾಜರು ಸುಮಾರು ಐದು ಎಕರೆಯಷ್ಟು ಸ್ಥಳದಾನ ಮಾಡಿದ್ದರು. ಅವರ ಅಧ್ಯಕ್ಷತೆಯಲ್ಲಿ ವಿಠಲ ವಿದ್ಯಾ ಸಂಘ ಆರಂಭಗೊಂಡಿತ್ತು. ದೇವಸ್ಯ ನಾರಾಯಣ ಭಟ್ಟರು ಸಂಚಾಲಕರಾಗಿ ಮುನ್ನಡೆಸಿದ್ದು, ಇವರಿಗೆ ಪ್ರೇರಕ ಶಕ್ತಿಯಾಗಿದ್ದ ಜಿಲ್ಲಾ ಸಹಕಾರಿ ಪಿತಾಮಹವೆನಿಸಿದ್ದ ಮೊಳಹಳ್ಳಿ ಶಿವರಾಯರು, ಪ್ರಥಮ ಮುಖ್ಯೋಪಾಧ್ಯಾಯರಾಗಿದ್ದ ಮಡಿಯಾಲ ನಾರಾಯಣ ಭಟ್ 1954ರಲ್ಲಿ ಚೊಚ್ಚಲ ಎಸ್ಎಸ್ಎಲ್ಸಿ ತಂಡ ಹೊರ ತಂದಾಗಿನಿಂದ ವಿಠಲ ಹೈಸ್ಕೂಲ್ ಹಳೆ ವಿದ್ಯಾರ್ಥಿ ಸಂಘ ಹುಟ್ಟಿಕೊಂಡಿತ್ತು. ವಿಠಲ ಹೈಸ್ಕೂಲ್ನ ಹಳೆ ವಿದ್ಯಾರ್ಥಿ ಸಂಘದ ಪ್ರಥಮ ಅಧ್ಯಕ್ಷ, ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಪದ್ಮನಾಭ ಕೆದಿಲಾಯ ಅವರ ಅಧ್ಯಕ್ಷತೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಕುಟುಂಬ ಮಿಲನ ಕಾರ್ಯಕ್ರಮ ಆಯೋಸಲಾಗಿದೆ. ಪ್ರಸ್ತುತ ಈ ಸಂಸ್ಥೆಯಲ್ಲಿ 1600 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕ್ರೀಡೆ ಸೇರಿದಂತೆ ನಾನಾ ಚಟುವಟಿಕೆಯಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ ಎಂದು ವಿವರಿಸಿದರು.
ಈ ಕಾರ್ಯಕ್ರಮದಲ್ಲಿ ಬೆಳಗ್ಗೆ ಉಪಾಹಾರ ಹಾಗೂ ಸ್ನೇಹಮಿಲನ, ಬದುಕು ರೂಪಿಸಿದ ಹಿರಿಯರಿಗೆ ನಮನ ಸಲ್ಲಿಕೆ, ಸಾಧಕರ ಅನಿಸಿಕೆ, ಸಂವಾದ, ಭೋಜನದ ಬಳಿಕ ಮನರಂಜನಾ ಕಾರ್ಯಕ್ರಮ ಹಾಗೂ ಫನ್ ಗೇಮ್ಸ್ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಬೆಂಗಳೂರು ಸುಪ್ರಜಿತ್ ಎಂಜಿನಿಯರ್ ಲಿಮಿಟೆಡ್ನ ಆಡಳಿತ ನಿರ್ದೇಶಕ ಅಜಿತ್ ಕುಮಾರ್ ರೈ, ಬೆಂಗಳೂರು ಕೆಇಬಿ ನಿವೃತ್ತ ಎಂಜಿನಿಯರ್ ಪದ್ಮನಾಭ ಭಟ್, ಕನ್ನಡ ಚಲನಚಿತ್ರ ಸಂಗೀತ ನಿರ್ದೇಶಕ ವಿ. ಮನೋಹರ್, ನಿವೃತ್ತ ಪ್ರಾಧ್ಯಾಪಕಿ ಡಾ. ಪಾರ್ವತಿ ಜಿ ಐತಾಳ್, ಮುಂಬಾಯಿ ಮೆಝ್ಗಾನ್ ಡಾಕ್ ಶಿಪ್ ಬಿಲ್ಡರ್ಸ್ನ ನಿವೃತ್ತ ಜನರಲ್ ಮೆನೇಜರ್ ಅಲ್ಫೋನ್ಸ್ ಸಿಲೆಸ್ಟರ್ ಮಸ್ಕರೇಂಞಸ್, ಪಣಂಬೂರು ಪೊಲೀಸ್ ಇನ್ಸ್ಪೆಕ್ಟರ್ ರಫೀಕ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿಠಲ ವಿದ್ಯಾ ಸಂಘದ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ಕಾಲೇಜು ಪ್ರಿನ್ಸಿಪಾಲ್ ಆದರ್ಶ ಚೊಕ್ಕಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿಪ್ರಕಾಶ್, ಸಂಚಲನ ಸಮಿತಿ ಗೌರವಾಧ್ಯಕ್ಷ ಎಚ್. ಸುಬ್ರಹ್ಮಣ್ಯ ಭಟ್, ಅಧ್ಯಕ್ಷ ರಾಧಾಕೃಷ್ಣ ನಾಯಕ್ ಉಪಸ್ಥಿತರಿದ್ದರು.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...