Wednesday, July 9, 2025

ಮುಂದುವರಿದ ಮಳೆ, ತಾಲೂಕಿನ ಹಲವೆಡೆ ಹಾನಿ, ಲಕ್ಷಾಂತರ ರೂ ನಷ್ಟ

ಬಂಟ್ವಾಳ: ತಾಲೂಕಿನಲ್ಲಿ ಅ. 12ರಂದು ದಿನವಿಡೀ ಸುರಿದ ಮಳೆಯಿಂದ ಸಾಕಷ್ಟು ಕಡೆಗಳಲ್ಲಿ ಹಾನಿ ಸಂಭವಿಸಿದೆ. ಕೊಳ್ನಾಡು ಗ್ರಾಮದ ಕಾಡುಮಠದಲ್ಲಿ ಮೇಲಿನ ಮನೆಯವರ ಆವರಣ ಗೋಡೆ ಕುಸಿದು ಚಿತ್ರಾವತಿ ಅವರ ಮನೆಗೆ ಹಾನಿಯಾಗಿದೆ. ಕರಿಯಂಗಳ ಗ್ರಾಮದ ರಂಜಿತ್ ಶೆಟ್ಟಿ ಅವರ ನಿರ್ಮಾಣ ಹಂತದ ಮನೆ ಕುಸಿದಿದೆ.

ಅರಳ ಗುಡ್ಡೆಯಂಗಡಿಯಲ್ಲಿರುವ ಶಾಲೆಯ ತಡೆಗೋಡೆ ಕುಸಿದು ಶಾಲೆಯ ಮೂರು ಬಸ್ಸುಗಳಿಗೆ ಹಾನಿಯಾಗಿದೆ. ಸರಪಾಡಿ ಗ್ರಾಮದ ಉಜಿರಾಡಿಯಲ್ಲಿ ಐತಪ್ಪ ಪೂಜಾರಿ ಅವರ ಮನೆಯ ಬದಿಯ ತಡೆಗೋಡೆ ಕುಸಿದಿದೆ. ಅನಂತಾಡಿ ಗ್ರಾಮದ ಬಾಕಿಲದಲ್ಲಿ ವಾಣಿ ಅವರ ತಡೆಗೋಡೆ ಕುಸಿದಿದೆ. ಅರಳ ಗ್ರಾಮದ ಅಲ್ಮುಡೆಯಲ್ಲಿ ಚಂದ್ರಾವತಿ ಉಮೇಶ್ ಅವರ ಮನೆಯ ಆವರಣ ಗೋಡೆ ಕುಸಿದಿದೆ.

ಅಮ್ಟಾಡಿ ಗ್ರಾಮದ ಮುಂಡೆಗುರಿಯಲ್ಲಿ ಜಾನಕಿ ಅವರ ಮನೆಯ ಮುಂಭಾಗಕ್ಕೆ ಆವರಣ ಗೋಡೆ ಕುಸಿದಿದೆ. ಅರಳ ಗ್ರಾಮದ ಶ್ರೀ ಗರುಡ ಮಹಾಕಾಳಿ ದೇವಸ್ಥಾನದ ಹಿಂಭಾಗದಲ್ಲಿ ಆವರಣ ಗೋಡೆ ಕುಸಿದಿದೆ. ಕೊಯಿಲ ಗ್ರಾಮದ ಮೋಹನ್ ಪೂಜಾರಿ ಅವರ ಮನೆಯ ಹಿಂಬದಿಯಲ್ಲಿ ಹಾನಿಯಾಗಿದೆ.

ಬಾಳ್ತಿಲ ಗ್ರಾಮದ ಸುಧೆಕಾರುನಲ್ಲಿ ಸೇಸಪ್ಪ ನಾಯ್ಕ್ ಮನೆಯ ಹಿಂಬದಿ ಗುಡ್ಡ ಕುಸಿದು ಹಾನಿಯಾಗಿದೆ. ಅರಳ ಗ್ರಾಮ ನಿವಾಸಿ ಸುಂದರ ಅವರ ಮನೆಯ ಮೇಲೆ ಆವರಣ ಗೋಡೆ ಕುಸಿದಿದೆ. ಸಜೀಪನಡು ಗ್ರಾಮದ ದೇರಾಜೆ ಬರೆ ಮನೆ ಲೀಲಾ ಪೂಜಾರಿ ಅವರ ಮನೆಯ ಸಮೀಪ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ಸಜೀಪಮೂಡ ಗುರುಮಂದಿರದ ಬಳಿ ಶಬೀರ್ ಅವರ ತಡೆಗೋಡೆ ಕುಸಿದು ರವಿ ಅವರ ಮನೆಯ ತಗಡು ಶೀಟ್‌ಗಳಿಗೆ ಹಾನಿಯಾಗಿದೆ.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...