Wednesday, January 28, 2026

ಮಂಚಿ: ದಾರಿದೀಪ ಸರಿಪಡಿಸುವಂತೆ ತಾ.ಪಂ. ಇಒಗೆ ಮನವಿ

ಬಂಟ್ವಾಳ: ತಾಲೂಕಿನ ಮಂಚಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಾರಿದೀಪ ಹಾಗೂ ಹೈಮಾಸ್ಕ್ ದೀಪಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಎಸ್ಡಿಪಿಐ ಮಂಚಿ ವಲಯ ಸಮಿತಿಯಿಂದ ಸೋಮವಾರ ಬಂಟ್ವಾಳ ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು.
ಇಲ್ಲಿನ ಹೈಮಾಸ್ಕ್ ಮತ್ತು ದಾರಿದೀಪಗಳು ಹದಗೆಟ್ಟು ಕೆಲವು ತಿಂಗಳಾಗುತ್ತಾ ಬಂದರೂ ಇದುವರೆಗೂ ಸರಿಪಡಿಸುವ ಕಾರ್ಯ ನಡೆದಿಲ್ಲ. ಈ ಬಗ್ಗೆ ಸರಿಪಡಿಸುವಂತೆ ಕೆಲ ತಿಂಗಳ ಹಿಂದೆಯೇ ಪಂಚಾಯತ್‌ಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಇದುವರೆಗೂ  ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಸರಿಪಡಿಸದೇ ಇದ್ದಲ್ಲಿ ಗ್ರಾಪಂ ಮುಂಭಾಗದಲ್ಲಿ ಧರಣಿ ನಡೆಸುವುದಾಗಿ ಸಂಘಟನೆಯು ಮನವಿಯಲ್ಲಿ ತಿಳಿಸಿದೆ.
ಈ ಸಂದರ್ಭದಲ್ಲಿ ಎಸ್ಡಿಪಿಐ ಮಂಚಿ ವಲಯ ಸಮಿತಿ ಅಧ್ಯಕ್ಷ ಫೈಝಲ್ ಮಂಚಿ, ಎಸ್ಡಿಪಿಐ ಬಂಟ್ವಾಳ ಸಮಿತಿ ಸದಸ್ಯ ಮಲಿಕ್ ಕೊಳಕೆ, ಪಿಎಫ್‌ಐ ಕುಕ್ಕಾಜೆ ಘಟಕಾಧ್ಯಕ್ಷ ಶಾಕಿರ್ ಕುಕ್ಕಾಜೆ, ಅಶ್ರಫ್ ಬಾಬುಕೋಡಿ, ನೌಫಲ್ ಕುಕ್ಕಾಜೆ ಸೈಟ್, ಫೈಝಾನ್ ಕುಕ್ಕಾಜೆ ಉಪಸ್ಥಿತರಿದ್ದರು.

More from the blog

ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ – ಒಡಿಯೂರುಶ್ರೀ

ವಿಟ್ಲ: ಸದೃಢ ದೇಶ ನಿರ್ಮಾಣದಲ್ಲಿ ಸೈನಿಕರ ಪರಿಶ್ರಮ, ತ್ಯಾಗ ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ. ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಒಡಿಯೂರು ರಾಜಾಂಗಣದಲ್ಲಿ...

ವಿಟ್ಲ ಪಡ್ನೂರು : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪವನ್ನು ಬದಲಾಯಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ವಿಟ್ಲ ಪಡ್ನೂರು ಗ್ರಾಮ...

ಪುತ್ತೂರು : ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ – ನಾಲ್ವರ ಬಂಧನ

ಪುತ್ತೂರು : ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿ ದ್ದಾರೆ ಮೊಹಮ್ಮದ್ ಹರ್ಷದ್...

ಕೊರಗ ಸಮುದಾಯದ ಆಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ತಹಶೀಲ್ದಾರ್ ಭೇಟಿ, ಪ್ರತಿಭಟನೆ ಹಿಂಪಡೆದ ಹೋರಾಟಗಾರರು

ಬಂಟ್ವಾಳ: ಬಂಟ್ವಾಳ ಆಡಳಿತ ಸೌಧದ ಕಚೇರಿ ಮುಂಭಾಗದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ,...