ಬಂಟ್ವಾಳ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಸುಖಪಾಲ್ ಪೊಳಲಿ ಅವರ ಮೇಲಿನ ಹಲ್ಲೆ ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ಹಾಗೂ ಇಂತಹ ಘಟನೆಗಳು ಮರುಕಳಿಸಿದಂತೆ ಎಚ್ಚರಿಸುವ ಸಲುವಾಗಿ ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ನೇತ್ರತ್ವದಲ್ಲಿ ಬಂಟ್ವಾಳ ಎ.ಎಸ್. ಪಿ.ಶಿವಾಂಷು ರಜಪೂತ್ ಅವರಿಗೆ ಮನವಿ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಮೌನೇಶ್ ವಿಶ್ವಕರ್ಮ, ಉಪಾಧ್ಯಕ್ಷ ಯಾದವ ಅಗ್ರಬೈಲು, ಪ್ರೆಸ್ ಕ್ಲಬ್ ಕಾರ್ಯದರ್ಶಿ ಚಂದ್ರಶೇಖರ್ ಕಲ್ಮಲೆ, ಸದಸ್ಯರಾದ ರತ್ನದೇವ್ ಪುಂಜಾಲಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.

