ಬಂಟ್ವಾಳ: ತಾಲೂಕಿನ ಮಂಚಿ ಹಾಗೂ ಇರಾ ಗ್ರಾಮಗಳ ವ್ಯಾಪ್ತಿಗೊಳಪಟ್ಟ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಮಂಚಿ ಇದರ ನೂತನ ಅಧ್ಯಕ್ಷರಾಗಿ ಬಿ. ಉಮರ್ ಮಂಚಿ ಅವರು ಅವಿರೋಧವಾಗಿ ಪುನರಾಯ್ಕೆಗೊಂಡರು. ಉಪಾಧ್ಯಕ್ಷರಾಗಿ ವಿಶ್ವನಾಥ್ ನಾಯ್ಕ್ ನಿರ್ಭೈಲು ಆಯ್ಕೆಯಾದರು. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 14 ಸ್ಥಾನಗಳ ಪೈಕಿ ಕಾಂಗ್ರೆಸ್ ಬೆಂಬಲಿತರು 9 ಸ್ಥಾನಗಳನ್ನು ಗೆಲ್ಲುವುದರೊಂದಿಗೆ ಮತ್ತೆ ಆಡಳಿತದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿತ್ತು. ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಗೊಂಡವರನ್ನು ಮಾಜಿ ಸಚಿವ ಬಿ. ರಮನಾಥ್ ರೈ, ಮಂಗಳೂರು ಶಾಸಕ ಯು. ಟಿ. ಖಾದರ್, ಬಂಟ್ವಾಳ ತಾ.ಪಂ. ನ ಅಧಕ್ಷರಾದ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ವಾಸ್ ಆಲಿ, ಇರಾ ಗ್ರಾ.ಪಂ. ಅಧ್ಯಕ್ಷ ಅಬ್ದಲ್ ರಝಾಕ್ ಕುಕ್ಕಾಜೆ, ಮಂಚಿ ವಲಯ ಕಾಂಗ್ರೆಸ್ ನ ಅಧ್ಯಕ್ಷ ಅಬ್ದುಲ್ ರಹಿಮಾನ್, ಇರಾ ವಲಯ ಕಾಂಗ್ರೆಸ್ ನ ಅಧ್ಯಕ್ಷ ಅನಿಲ್ ಕುಮಾರ್ ಸೂತ್ರಬೈಲ್, ಅಭಿನಂದನೆ ಸಲ್ಲಿಸಿದ್ದಾರೆ. ಬಂಟ್ವಾಳದ ಸಹಕಾರಿ ಅಭಿವೃದ್ಧಿ ಅಧಿಕಾರಿ ತ್ರೀವೇಣಿ ಕೆ.ರಾವ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.



