Wednesday, February 12, 2025

ಮಂಚಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ತಾಲೂಕಿನ ಮಂಚಿ-ಕೊಳ್ನಾಡು ಶ್ರೀಗೋಪಾಲಕೃಷ್ಣ ದೇವಸ್ಥಾನದ ಪ್ರಥಮ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ “ಮಂಚಿ ಜಾತ್ರೆ” ಯ ಅಮಂತ್ರಣ ಪತ್ರಿಕೆಯ ಬಿಡುಗಡೆಯ ಸರಳ ಸಮಾರಂಭ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಅಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಸಂಪೂರ್ಣ ಅಜೀರ್ಣಾವಸ್ಥೆಯಲ್ಲಿದ್ದ ಶ್ರೀ ಕ್ಷೇತ್ರವನ್ನು ಕಳೆದ ವರ್ಷ ಪುನರ್ ನವೀಕರಿಸಿ ಪುನರ್ ಅಷ್ಠಬಂಧ, ಬ್ರಹ್ಮಕಲಶವನ್ನು ಅದ್ದೂರಿಯಾಗಿ ನೆರವೇರಿಸಲಾಗಿದ್ದು, ಇದರ ಪ್ರಥಮ ಪ್ರತಿಷ್ಠಾ ವರ್ಧಂತಿ ಶ್ರೀ ಮಂಕಡೆ ರಾಮಣ್ಣಾಚಾರ್ಯರ  ಉಪಸ್ಥಿತಿಯಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಯವರ ನೇತೃತ್ವದಲ್ಲಿ ಎ.28-29 ರಂದು ನಡೆಯಲಿದೆ ಎಂದರು. ಜಾತ್ರೆಯ ಪ್ರಯುಕ್ತ ಶ್ರೀ ಗಣಪತಿಹೋಮ, ಶ್ರೀ ರಂಗಪೂಜೆ, ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ, ಶ್ರೀ ದುರ್ಗಾನಮಸ್ಕಾರ, ಶತರುದ್ರಾಭಿಷೇಕ, ಆರ್ಧ ಏಕಾಹ ಭಜನೆ, ಬಲಿವಾಡು ಸೇವೆ, ಸುಡುಮದ್ದು ಪ್ರದರ್ಶನ, ಶ್ರೀ ದೇವರ ಬಲಿಹೊರಟು ಉತ್ಸವ, ದೈವಗಳ ನೇಮ ನಡೆಯಲಿದೆ. ಹಾಗೆಯೇ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಮಹಾಸ್ವಾಮಿಯವರ ಉಪಸ್ಥಿತಿಯಲ್ಲಿ ಧಾರ್ಮಿಕ ಸಭೆಯು ನಡೆಯಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕಾಲಮಿತಿ ಯಕ್ಷಗಾನ ಬಯಲಾಟವನ್ನು ಆಯೋಜಿಸಲಾಗಿದೆ ಎಂದರು. ಈ ಸಂದರ್ಭ ಸಮಿತಿ ಸದಸ್ಯರಾದ ಸೀತಾರಾಮ ಶೆಟ್ಟಿ, ವಿಠಲಪ್ರಭು, ವಕೀಲ ರವೀಂದ್ರ ಕುಕ್ಕಾಜೆ ಅವರು ಉಪಸ್ಥಿತರಿದ್ದರು.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...