Wednesday, July 9, 2025

ಜ.5: ಚಂದನ ವಾಹಿನಿಯಲ್ಲಿ ‘ಮಂದಾರ ರಾಮಾಯಣ’ ಕಾವ್ಯರೂಪಕ

ಪ್ರತಿ ತಿಂಗಳ ಮೊದಲ ಶನಿವಾರ ಮಹಾಕಾವ್ಯದ ಸರಣಿ ಕಾರ್ಯಕ್ರಮ
ಮುಂಬಯಿ (ಮಂಗಳೂರು): ತುಳು ವಾಲ್ಮೀಕಿ ಮಂದಾರ ಕೇಶವ ಭಟ್ಟರ ‘ಮಂದಾರ ರಾಮಾಯಣ’ ತುಳು ಮಹಾಕಾವ್ಯದ ಸರಣಿ ಕಾರ್ಯಕ್ರಮ ಪ್ರತಿ ತಿಂಗಳ ಮೊದಲ ಶನಿವಾರ ಬೆಳಿಗ್ಗೆ 11.30 ಗಂಟೆಗೆ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಕಾವ್ಯರೂಪಕವನ್ನು ದ.ಕ.ಜಿಲ್ಲೆಯ ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ ಪ್ರಸ್ತುತಪಡಿಸುತ್ತಿದೆ.

ಹೊಸ ಪರಿಕಲ್ಪನೆಯೊಂದಿಗೆ ಮೂಡಿಬರುವ ’ಮಂದಾರ ರಾಮಾಯಣ’ ತುಳು ಕಾವ್ಯರೂಪಕದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ, ಕವಿ-ಲೇಖಕ ಮತ್ತು ಯಕ್ಷಗಾನ ಅರ್ಥಧಾರಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಕೃತಿ ಪರಿಚಯದೊಂದಿಗೆ ವ್ಯಾಖ್ಯಾನ ನೀಡುವರು. ಖ್ಯಾತ ಗಾಯಕ ಮತ್ತು ಹರಿದಾಸ ತೋನ್ಸೆ ಪುಷ್ಕಳಕುಮಾರ್ ಕಾವ್ಯವಾಚನ ಮಾಡುವರು. ಅಲ್ಲದೆ ವಿಶೇಷವಾಗಿ ಶ್ರೀಧರ ರೈ ಕಾಸರಗೋಡು ಅವರ ಮೃದಂಗ ಹಾಗೂ ಬೆಂಗಳೂರಿನ ರಾಜೀವ ಲೋಚನ ಎಂ.ಎಸ್ ಅವರ ಪಿಟೀಲು ವಾದನದ ಹಿಮ್ಮೇಳವೂ ಇದೆ.

ಕೊಣಾಜೆ ನೃತ್ಯ ಲಹರಿ ನಾಟ್ಯಾಲಯದ ವಿದುಷಿ ರೇಷ್ಮಾ ನಿರ್ಮಲ್ ಭಟ್ ಅವರ ನೃತ್ಯ ನಿರ್ದೇಶನದಲ್ಲಿ ರೂಪಕಕ್ಕೆ ದೃಶ್ಯ ಸಂಯೋಜನೆ ಮಾಡಲಾಗಿದೆ. ರೇಶ್ಮಾ ನಿರ್ಮಲ್, ದೀಪಿಕಾ ಭಟ್, ಶ್ರೀರಕ್ಷಾ, ರೇಷ್ಮಾ, ಭಾಗ್ಯ, ರಶ್ಮಿ, ಸೌಮ್ಯ, ಯಶಸ್ ಭಟ್ ಮತ್ತು ಶ್ರೇಯಾ ರಾಮಾಯಣದ ವಿವಿಧ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ದೂರದರ್ಶನದ ಎಂ.ಆರ್.ಸುಜಾತ ಅವರ ತಾಂತ್ರಿಕ ನಿರ್ದೇಶನದಲ್ಲಿ ತುಳು ವಿಭಾಗದ ಲಕ್ಷಿ ಕಾರಂತ್ ಎಂ.ಎಸ್ ಈ ಕಾರ್ಯಕ್ರಮವನ್ನು ನಿರ್ಮಿಸಿ ಪ್ರಸಾರಕ್ಕೆ ಅಣಿಗೊಳಿಸಿದ್ದಾರೆ.

ಮಂದಾರ ರಾಮಾಯಣದ ಆರಂಭದಲ್ಲಿ ಬರುವ ಪುಂಚದ ಬಾಲೆ, ಬಂಗಾರ್ದ ತೊಟ್ಟಿಲ್, ಅಜ್ಜೇರೆ ಸಾಲೆ, ಮದಿಮೆದ ದೊಂಪ, ಸೇಲೆದ ಸೋಲು ಈ ಐದು ಅಧ್ಯಾಯಗಳನ್ನು 13 ಕಂತುಗಳಲ್ಲಿ ಚಿತ್ರೀಕರಿಸಿ ಕೊಳ್ಳಲಾಗಿದ್ದು ಅದು ಸರಣಿ ರೂಪದಲ್ಲಿ ಪ್ರತಿ ತಿಂಗಳ ಮೊದಲ ಶನಿವಾರ ದೂರದರ್ಶನದಲ್ಲಿ ಪ್ರಸಾರವಾಗುವುದು.

ಇದೇ ಜ.5 ರಂದು ಶನಿವಾರ ಬೆಳಿಗ್ಗೆ 11.30 ಗಂಟೆಗೆ ಬೆಂಗಳೂರು ದೂರದರ್ಶನದ ಚಂದನ ವಾಹಿನಿಯಲ್ಲಿ ಸರಣಿಯ ಪ್ರಥಮ ಕಂತು ಪ್ರಸಾರ ಆರಂಭಿಸಿತು. ಕವಿ ದಿ| ಮಂದಾರ ಕೇಶವ ಭಟ್ಟರ ಜನ್ಮ ಶತಮಾನೋತ್ಸವ ಸಂದರ್ಭದಲ್ಲಿ ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ ಈ ಕಾರ್ಯಕ್ರಮ ಸಂಯೋಜಿಸಿದೆ.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...