Saturday, February 8, 2025

ಜ.5: ಚಂದನ ವಾಹಿನಿಯಲ್ಲಿ ‘ಮಂದಾರ ರಾಮಾಯಣ’ ಕಾವ್ಯರೂಪಕ

ಪ್ರತಿ ತಿಂಗಳ ಮೊದಲ ಶನಿವಾರ ಮಹಾಕಾವ್ಯದ ಸರಣಿ ಕಾರ್ಯಕ್ರಮ
ಮುಂಬಯಿ (ಮಂಗಳೂರು): ತುಳು ವಾಲ್ಮೀಕಿ ಮಂದಾರ ಕೇಶವ ಭಟ್ಟರ ‘ಮಂದಾರ ರಾಮಾಯಣ’ ತುಳು ಮಹಾಕಾವ್ಯದ ಸರಣಿ ಕಾರ್ಯಕ್ರಮ ಪ್ರತಿ ತಿಂಗಳ ಮೊದಲ ಶನಿವಾರ ಬೆಳಿಗ್ಗೆ 11.30 ಗಂಟೆಗೆ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಕಾವ್ಯರೂಪಕವನ್ನು ದ.ಕ.ಜಿಲ್ಲೆಯ ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ ಪ್ರಸ್ತುತಪಡಿಸುತ್ತಿದೆ.

ಹೊಸ ಪರಿಕಲ್ಪನೆಯೊಂದಿಗೆ ಮೂಡಿಬರುವ ’ಮಂದಾರ ರಾಮಾಯಣ’ ತುಳು ಕಾವ್ಯರೂಪಕದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ, ಕವಿ-ಲೇಖಕ ಮತ್ತು ಯಕ್ಷಗಾನ ಅರ್ಥಧಾರಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಕೃತಿ ಪರಿಚಯದೊಂದಿಗೆ ವ್ಯಾಖ್ಯಾನ ನೀಡುವರು. ಖ್ಯಾತ ಗಾಯಕ ಮತ್ತು ಹರಿದಾಸ ತೋನ್ಸೆ ಪುಷ್ಕಳಕುಮಾರ್ ಕಾವ್ಯವಾಚನ ಮಾಡುವರು. ಅಲ್ಲದೆ ವಿಶೇಷವಾಗಿ ಶ್ರೀಧರ ರೈ ಕಾಸರಗೋಡು ಅವರ ಮೃದಂಗ ಹಾಗೂ ಬೆಂಗಳೂರಿನ ರಾಜೀವ ಲೋಚನ ಎಂ.ಎಸ್ ಅವರ ಪಿಟೀಲು ವಾದನದ ಹಿಮ್ಮೇಳವೂ ಇದೆ.

ಕೊಣಾಜೆ ನೃತ್ಯ ಲಹರಿ ನಾಟ್ಯಾಲಯದ ವಿದುಷಿ ರೇಷ್ಮಾ ನಿರ್ಮಲ್ ಭಟ್ ಅವರ ನೃತ್ಯ ನಿರ್ದೇಶನದಲ್ಲಿ ರೂಪಕಕ್ಕೆ ದೃಶ್ಯ ಸಂಯೋಜನೆ ಮಾಡಲಾಗಿದೆ. ರೇಶ್ಮಾ ನಿರ್ಮಲ್, ದೀಪಿಕಾ ಭಟ್, ಶ್ರೀರಕ್ಷಾ, ರೇಷ್ಮಾ, ಭಾಗ್ಯ, ರಶ್ಮಿ, ಸೌಮ್ಯ, ಯಶಸ್ ಭಟ್ ಮತ್ತು ಶ್ರೇಯಾ ರಾಮಾಯಣದ ವಿವಿಧ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ದೂರದರ್ಶನದ ಎಂ.ಆರ್.ಸುಜಾತ ಅವರ ತಾಂತ್ರಿಕ ನಿರ್ದೇಶನದಲ್ಲಿ ತುಳು ವಿಭಾಗದ ಲಕ್ಷಿ ಕಾರಂತ್ ಎಂ.ಎಸ್ ಈ ಕಾರ್ಯಕ್ರಮವನ್ನು ನಿರ್ಮಿಸಿ ಪ್ರಸಾರಕ್ಕೆ ಅಣಿಗೊಳಿಸಿದ್ದಾರೆ.

ಮಂದಾರ ರಾಮಾಯಣದ ಆರಂಭದಲ್ಲಿ ಬರುವ ಪುಂಚದ ಬಾಲೆ, ಬಂಗಾರ್ದ ತೊಟ್ಟಿಲ್, ಅಜ್ಜೇರೆ ಸಾಲೆ, ಮದಿಮೆದ ದೊಂಪ, ಸೇಲೆದ ಸೋಲು ಈ ಐದು ಅಧ್ಯಾಯಗಳನ್ನು 13 ಕಂತುಗಳಲ್ಲಿ ಚಿತ್ರೀಕರಿಸಿ ಕೊಳ್ಳಲಾಗಿದ್ದು ಅದು ಸರಣಿ ರೂಪದಲ್ಲಿ ಪ್ರತಿ ತಿಂಗಳ ಮೊದಲ ಶನಿವಾರ ದೂರದರ್ಶನದಲ್ಲಿ ಪ್ರಸಾರವಾಗುವುದು.

ಇದೇ ಜ.5 ರಂದು ಶನಿವಾರ ಬೆಳಿಗ್ಗೆ 11.30 ಗಂಟೆಗೆ ಬೆಂಗಳೂರು ದೂರದರ್ಶನದ ಚಂದನ ವಾಹಿನಿಯಲ್ಲಿ ಸರಣಿಯ ಪ್ರಥಮ ಕಂತು ಪ್ರಸಾರ ಆರಂಭಿಸಿತು. ಕವಿ ದಿ| ಮಂದಾರ ಕೇಶವ ಭಟ್ಟರ ಜನ್ಮ ಶತಮಾನೋತ್ಸವ ಸಂದರ್ಭದಲ್ಲಿ ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ ಈ ಕಾರ್ಯಕ್ರಮ ಸಂಯೋಜಿಸಿದೆ.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...