Thursday, February 13, 2025

ಮಂಗಳೂರು ಖಾಸಗಿ ಬಸ್ ಚಾಲಕರ ಹೊಡೆದಾಟ

ಮಂಗಳೂರು: ಇಲ್ಲಿನ ಖಾಸಗಿ ಬಸ್ ಗಳ ಮಧ್ಯೆ ಟೈಮಿಂಗ್ ಹೆಸರಲ್ಲಿ ಗಲಾಟೆಗಳು ಸಾಮಾನ್ಯವಾಗಿದೆ. ಆದರೆ ಇಲ್ಲಿ ಖಾಸಗಿ ಬಸ್ಸಿನ ಚಾಲಕರಿಬ್ಬರು ನಡುಬೀದಿಯಲ್ಲಿ ಬಸ್ ನಿಲ್ಲಿಸಿ ಹೊಡೆದಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಬೆಂದೂರ್ ವೆಲ್ ಆಗ್ನೇಸ್ ಕಾಲೇಜಿನ ಎದುರಿನ ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಎರಡೂ ಬಸ್ ಗಳ ಚಾಲಕರು ಹೊಡೆದಾಡಿದ್ದಾರೆ. ಇವರುಗಳ ಜಗಳ ಇತರ ವಾಹನ ಸವಾರರಿಗೂ ತೊಂದರೆ ಹಾಗೂ ಟ್ರಾಫಿಕ್ ಜಾಮ್ ಕೂಡಾ ಆಗಿದೆ. ಇದರಿಂದಾಗಿ ವಾಹನಗಳ ಚಾಲಕರು ದಬಾಯಿಸಿದಲ್ಲದೇ, ಕಾರು ಚಾಲಕನೊಬ್ಬ ಇಬ್ಬರನ್ನೂ ಎಳೆದು ಜಗಳ ಬಿಡಿಸಿದ್ದಾನೆ ಹಾಗೂ ರಸ್ತೆಯಿಂದ ಬಸ್ ತೆಗೆಯುವಂತೆ ದಬಾಯಿಸಿದ್ದಾನೆ. ಇಲ್ಲಿ ಬಸ್ ಚಾಲಕರು ಹೊಡೆದಾಡುತ್ತಿದ್ದರೆ, ಬಸ್ ನಿರ್ವಾಹಕರು ನಿಂತು ನೋಡುತ್ತಿದ್ದರು. ಚಾಲಕರ ಹೊಡೆದಾಟವನ್ನು ಕಾರಿನಲ್ಲಿದ್ದ ಪ್ರಯಾಣಿಕರು ಮೊಬೈಲಿನಲ್ಲಿ ಸೆರೆ ಹಿಡಿದಿದ್ದು ಡ್ರೈವರ್ ಗಳ ರಂಪಾಟ ಬೀದಿಗೆ ಬಂದಿದೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...