Thursday, June 26, 2025

ಮಂಗಳೂರು – ಕಾಸರಗೋಡು: ಪ್ರತಿನಿತ್ಯದ ಸಂಚಾರಕ್ಕೆ ಅನುಮತಿ ನೀಡಿದ ದ.ಕ. ಜಿಲ್ಲಾಡಳಿತ

ಮಂಗಳೂರು : ಕೊರೊನಾ ತಡೆಗಟ್ಟುವ ನಿಟ್ಟುನಲ್ಲಿ ಹೇರಲಾಗಿದ್ದ ಲಾಕ್ ಡೌನ್ ನಿಂದಾಗಿ ಕಾರಣದಿಂದ ಮಂಗಳೂರು – ಕಾಸರಗೋಡಿನ ಮಧ್ಯೆಯ ನಿತ್ಯ ಸಂಚಾರ ತಡೆಗಟ್ಟಿತು. ಆದರೆ ಇಂದು ದ.ಕ. ಜಿಲ್ಲಾಡಳಿತ ನಿತ್ಯ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಹಾಗೆಂದು ಎಲ್ಲರೂ ಸಿಕ್ಕ ಸಿಕ್ಕಂತೆ ಓಡಾಡುವಂತಿಲ್ಲ. ಷರತ್ತಿ ನನ್ವಯ ಮಾತ್ರ ಸಂಚರಿಸಲು ಅನುಮತಿ ನೀಡಲಾಗಿದೆ.
ಕಾಸರಗೋಡಿನಲ್ಲಿರುವ ಬಹಳಷ್ಟು ಗಡಿನಾಡ ಕನ್ನಡಿಗರು ಉದ್ಯೋಗ, ಶಿಕ್ಷಣ ನಿಮಿತ್ತ ದಿನನಿತ್ಯ ಮಂಗಳೂರಿಗೆ ಓಡಾಟ ನಡೆಸುತ್ತಾರೆ. ಇದೇ ಕಾರಣಕ್ಕೆ ಉಭಯ ಜಿಲ್ಲೆಗಳು ಒಂದಕ್ಕೊಂದು ಅವಲಂಭಿತವಾಗಿರುವುದರಿಂದ ಉದ್ಯೋಗಿಗಳು, ವಿದ್ಯಾರ್ಥಿಗಳು, ಆರೋಗ್ಯ ಸೇವಕರು ಮತ್ತು ಸರ್ಕಾರಿ ನೌಕರರು ಪಾಸ್ ಬಳಸಿ ಸಂಚರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶ ನೀಡಿದ್ದಾರೆ.
ಅಗತ್ಯ ಓಡಾಟವಿರುವವರು Dkdpermit ವೆಬ್ ಸೈಟ್ ನಲ್ಲಿ ರಿಜಿಸ್ಟರ್ ಮಾಡಿ ಪಾಸ್ ಪಡೆಯಲು ಸೂಚಿಸಲಾಗಿದ್ದು, ಅನ್ಯ ಕಾರ್ಯಕ್ಕೆ ಪಾಸ್ ಬಳಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ಪಾಸ್ ಗೆ ಅರ್ಜಿ ಸಲ್ಲಿಸಲು ಆಧಾರ್, ಉದ್ಯೋಗ ವಿಳಾಸ, ಮಾಹಿತಿ ಸಲ್ಲಿಸುವುದು ಕಡ್ಡಾಯವಾಗಿದ್ದು, ಪ್ರಯಾಣಿಕರು ನಿತ್ಯ ಥರ್ಮಲ್ ಸ್ಕ್ಯಾನ್ ಮತ್ತು ಆರೋಗ್ಯ ತಪಾಸಣೆ ಕಡ್ಡಾಯವಾಗಿರಲಿದೆ. ಅಲ್ಲದೆ ಈ ಪಾಸ್ ಪಡೆದುಕೊಂಡವರು ಜಿಲ್ಲೆಗೆ ಪ್ರವೇಶ ಪಡೆದ ಸಮಯ ಮತ್ತು ನಿರ್ಗಮನ ಸಮಯ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ನಮೂದು ಬೇಕಾಗುತ್ತದೆ. ಒಂದು ವೇಳೆ ಪಾಸ್ ಪಡೆದಾತ ಜಿಲ್ಲೆಯಿಂದ ಬಂದು ಹೋಗದ ಸಮಯದ ಮಾಹಿತಿ ನೀಡದಿದ್ದರೆ ಅಂಥವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...