Sunday, July 6, 2025

ದೇಶಕ್ಕೆ 5 ಸಾವಿರ ಕೋ ರೂ. ಉಳಿಸಿದ ಮಂಗಳೂರು, ಉಡುಪಿ

ಮಂಗಳೂರು : ಕೊರೊನಾ ನಿಯಂತ್ರಣಕ್ಕಾಗಿ ಹೇರಲಾಗಿದ್ದ ಲಾಕ್‍ಡೌನ್ ಸಮಯದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿ ಕಡಿಮೆ ದರದಲ್ಲಿ ದೊರೆತ ಕಾರಣ ಮಂಗಳೂರಿನ ಪೆರ್ಮುದೆ ಹಾಗೂ ಉಡುಪಿಯ ಪಾದೂರು ಹಾಗೂ ಆಂಧ್ರಪ್ರದೇಶದ ವಿಶಾಖಪಟ್ಟಣದ ಭೂಗತ ಕಚ್ಚಾ ತೈಲ ಸಂಗ್ರಹಾಗಾರದಲ್ಲಿ ತೈಲ ಭರ್ತಿ ಮಾಡಿದ ಪರಿಣಾಮ ಒಟ್ಟು 5 ಸಾವಿರ ಕೋ ರೂ. ವಿದೇಶಿ ವಿನಿಮಯ ಉಳಿತಾಯವಾಗಿದೆ ಎಂದು ಪೆಟ್ರೋಲಿಯಂ ಸಚಿವಾಲಯ ಟ್ವೀಟ್ ನಲ್ಲಿ ತಿಳಿಸಿದೆ.
ಕೋವಿಡ್ 19ನಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಇಳಿಕೆ ಕಂಡಿದ್ದು, ಈ ಸಂದರ್ಭದಲ್ಲಿ ಭಾರತ ಕಡಿಮೆ ದರದಲ್ಲಿ ತೈಲವನ್ನು ಖರೀದಿಸಿ ಈ ಸಂಗ್ರಹಾಗಾರದಲ್ಲಿ ಸಂಗ್ರಹಿಸಿ ಭರ್ತಿ ಮಾಡಿದೆ. ಕೋವಿಡ್19 ಬರುವುದಕ್ಕೆ ಮೊದಲು ಮಂಗಳೂರು, ಪಾದೂರು ಅರ್ಧ ತುಂಬಿದ್ದರೆ, ವಿಶಾಖಪಟ್ಟಣದಲ್ಲಿ ಸ್ವಲ್ಪ ಜಾಗ ಉಳಿದಿತ್ತು. ಈಗ ಸರ್ಕಾರ ಸೌದಿ ಅರೇಬಿಯಾ, ಯುಎಇ ಮತ್ತು ಇರಾಕ್ ನಿಂದ ತೈಲವನ್ನು ಖರೀದಿಸಿ ಭರ್ತಿ ಮಾಡಿದೆ.
ಭಾರತದ ತೈಲ ಸಂಗ್ರಹ ಏನೇನು ಸಾಲದು. ಒಟ್ಟು 90 ದಿನಗಳ ಬಳಕೆಗೆ ಆಗುವಷ್ಟು 13.32 ಮೆಟ್ರಿಕ್ ಟನ್ ತೈಲ ಸಂಗ್ರಹ ಅಗತ್ಯತೆ ಭಾರತಕ್ಕಿದೆ. ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ ಲಿಮಿಟೆಡ್ (ಐಎಸ್‍ಪಿಆರ್ ಎಲ್) ಮಂಗಳೂರು, ಉಡುಪಿ ಬಳಿಯ ಪಾದೂರು, ವಿಶಾಖಪಟ್ಟಣಂನಲ್ಲಿ ಭೂಗತ ತೈಲ ಸಂಗ್ರಹಣ ಘಟಕಗಳನ್ನು ಸ್ಥಾಪಿಸಿದೆ.

More from the blog

ಮುಂದುವರಿದ ಮಳೆ ಅಬ್ಬರ : ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ..

ಬಂಟ್ವಾಳ : ಶನಿವಾರವೂ ಮಳೆಗೆ ತಾಲೂಕಿನ ಅಲ್ಲಲ್ಲಿ ಹಾನಿಯಾಗಿದ್ದು, ಕಡೇಶ್ವಾಲ್ಯ ಗ್ರಾಮದ ನಡ್ಯೇಲು ಎಂಬಲ್ಲಿ ಕಾಲುಸಂಕ ಮುರಿದು ಬಿದ್ದಿರುತ್ತದೆ. ಇಲ್ಲಿನ ಗ್ರಾಮಪಂಚಾಯತ್ ಪೂರ್ವದಲ್ಲಿಯೇ ಎಚ್ಚರಿಕೆ ಫಲಕ ಅಳವಡಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿರುವುದಿಲ್ಲ. ತೋಡಿನಲ್ಲಿ...

ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನಾ ಕಾರ್ಯಕ್ರಮ..

ಮಂಗಳೂರು: ಕೊಟ್ಟಾರ ಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ಮಹಾನಗರ ಪಾಲಿಕೆಯ 16ನೇ ಬಂಗ್ರಕೂಳೂರು ವಾರ್ಡ್ನಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ ಇದರ ವತಿಯಿಂದ ನಿರ್ಮಾಣಗೊಂಡಿರುವ ನೂತನ ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನೆ...

Puttur : ಯುವತಿಗೆ ವಂಚಿಸಿದ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್‌ ವಶಕ್ಕೆ

ಪುತ್ತೂರು: ಯುವತಿಯೊಂದಿಗೆ ಮದುವೆಯಾಗುವುದಾಗಿ ದೈಹಿಕ ಸಂಪರ್ಕ  ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ...

Bhandaribettu : ರಸ್ತೆಗೆ ಉರುಳಿ ಬಿದ್ದ ಬಂಡೆಕಲ್ಲು – ಪುರಸಭೆ, ಕಂದಾಯ ಇಲಾಖೆಯಿಂದ ತೆರವು ಕಾರ್ಯ

ಬಂಟ್ವಾಳ : ಬಿಸಿರೋಡು - ವಿಲ್ಲಾಪುರಂ ರಾಜ್ಯ ಹೆದ್ದಾರಿಗೆ ಬಂಡೆಕಲ್ಲು ಉರುಳಿ ಬಿದ್ದ ಪರಿಣಾಮ, ಕಕ್ಕೆ ಪದವು ನಿವಾಸಿ ರವಿ ಎಂಬವರ ಸ್ಕೂಟರ್ ಹಾನಿಯಾಗಿ, ಅವರು ಗಾಯಗೊಂಡಿದ್ದಾರೆ. ಬಂಟ್ವಾಳ ಪುಂಜಾಲಕಟ್ಟೆ ರಾಷ್ಟೀಯ ಹೆದ್ದಾರಿ ಬಿ.ಸಿ.ರೋಡ್...