ಮಂಗಳೂರು : ಮಂಗಳೂರಿನಲ್ಲಿ ನಿನ್ನೆ ಶ್ರೀ ರಕ್ಷಾ ಹೆಸರಿನ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು, ಇಬ್ಬರ ಮೃತದೇಹ ಪತ್ತೆಯಾಗಿದೆ. ನಾಲ್ವರಿಗಾಗಿ ಇನ್ನೂ ಹುಡುಕಾಟವನ್ನು ನಡೆಸಲಾಗುತ್ತಿದೆ.
ಮೀನುಗಾರಿಕೆಗಾಗಿ ಮಂಗಳವಾರ ಮುಂಜಾನೆ ತೆರಳಿದ್ದ ಬೋಳಾರದ ಬೋಟ್ ಕಲ್ಲಿಗೆ ಡಿಕ್ಕಿ ಹೊಡೆದು ಮುಳುಗಡೆಯಾಗಿದೆ. ಬೋಟ್ನಲ್ಲಿದ್ದ ಮೀನುಗಾರರ ಪೈಕಿ ಆರು ಜನರು ನಾಪತ್ತೆಯಾದ ಬಗ್ಗೆ ಮಾಹಿತಿ ಸಿಕ್ಕಿತ್ತು.
ಕೂಡಲೇ ಹುಡುಕಾಟ ಪ್ರಾರಂಭಿಸಿ, ಬೊಕ್ಕಪಟ್ಣ ನಿವಾಸಿಗಳಾದ ಸುವರ್ಣ ಹಾಗೂ ಪ್ರೀತಂ ಎಂಬವವರ ಮೃತದೇಹ ಪತ್ತೆಯಾಗಿದೆ. ಕಸಬ ಬೆಂಗ್ರೆ ನಿವಾಸಿಗಳಾದ ಚಿಂತನ್, ಮೊಹಮ್ಮದ್ ಹಸೈನಾರ್, ಮೊಹಮ್ಮದ್ ಅನ್ಸಾರ್, ಝಿಯಾವುಲ್ಲ ಅವರಿಗಾಗಿ ಹುಡುಕಾಟ ಮುಂದುವರೆದಿದೆ.
ಬೋಟ್ ಮುಳುಗಡೆ ಬಳಿಕ ನಾಪತ್ತೆಯಾದ ನಾಲ್ವರಿಗಾಗಿ ತೀವ್ರ ಶೋಧ ಕಾರ್ಯವನ್ನು ನಡೆಸಲಾಗುತ್ತಿದೆ. ಬೋಟ್ ಕಲ್ಲಿಗೆ ಡಿಕ್ಕಿ ಹೊಡೆದ ರಭಸಕ್ಕೆ ಜಖಂಗೊಂಡಿದ್ದು, ಭಾಗಶಃ ಮುಳುಗಡೆಯಾಗಿದೆ ಎಂದು ಹೇಳಲಾಗುತ್ತಿದೆ.














