Wednesday, January 28, 2026

ಮಂಗಳೂರಿನ ವಿಮಾನ ನಿಲ್ದಾಣವನ್ನು ಮಾದರಿ ವಿಮಾನ ನಿಲ್ದಾಣವನ್ನಾಗಿ ಮಾಡುವ ಸಲುವಾಗಿ ಉಡನ್ ಯೋಜನೆಯಡಿ ಸೇರಿಸಲು ವಿಮಾನ ಸೇವೆ ಆಗ್ರಹಿಸಿ ಟ್ವಿಟರ್ ಅಭಿಯಾನ

ಮಂಗಳೂರು: ಮಂಗಳೂರಿನ ವಿಮಾನ ನಿಲ್ದಾಣವನ್ನು ಮಾದರಿ ವಿಮಾನ ನಿಲ್ದಾಣವನ್ನಾಗಿ ಮಾಡುವ ಸಲುವಾಗಿ ಉಡನ್ ಯೋಜನೆಯಡಿ ಸೇರಿಸಲು ವಿಮಾನ ಸೇವೆ ಆಗ್ರಹಿಸಿ ಟ್ವಿಟರ್ ಅಭಿಯಾನ ಕೈಗೊಂಡಿದ್ದು, ಅಕ್ಟೋಬರ್ 4 ರಂದು ದಿನವೀಡಿ ಈ ಟ್ವಿಟರ್ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಉಡಾನ್ ಯೋಜನೆಯಡಿಯಲ್ಲಿ ಬೆಳಗಾವಿ ವಿಮಾನ ನಿಲ್ದಾಣವು ಅನೇಕ ಸ್ಥಳಗಳಿಂದ ಬರುವ ವಿಮಾನಗಳು ದೊರಕಿರುವುದರಿಂದಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಪೈಪೋಟಿಯನ್ನು ನೀಡುತ್ತಿದೆ. ಹಾಗೂ ಬೆಳಗಾವಿಯು ಮಂಗಳೂರನ್ನು ಹಿಂದಿಕ್ಕಿ ಮುಂಚೂಣಿಯಲ್ಲಿದೆ.

ಉಡಾನ್ ಯೋಜನೆಯಡಿ ವಿಮಾನ ಸೇವೆ ಆರಂಭಿಸಲು #FlyfromIXE ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ಟ್ವಿಟರ್ ಅಭಿಯಾನ ಆರಂಭಗೊಂಡಿದ್ದು,ಈ ಅಭಿಯಾನಕ್ಕ 10 ಸಾವಿರಕ್ಕೂ ಹೆಚ್ಚು ಜನರಿಂದ ಟ್ವೀಟ್ ಆಗಿರುತ್ತಿದೆ. ಹಾಗೂ ರಾಜಕೀಯ ವ್ಯಕ್ತಿಯಾಗಿರುವ ಪ್ರಮೋದ್ ಮಧ್ವರಾಜ್ ಅವರು ಈ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.

ಈ ಟ್ವಿಟರ್ ಅಭಿಯಾನದಲ್ಲಿ ಮಂಗಳೂರಿಗೆ ಹೆಚ್ಚಿನ ವಿಮಾನ ಸೇವೆ ಆರಂಭಿಸುವ ಸಲುವಾಗಿ ಯೋಜನೆ ಹಾಕಿದ್ದು, ಕಳೆದ ಬಾರಿ ಲಾಕ್ ಡೌನ್ ವೇಳೆ ವಂದೇ ಭಾರತ್ ಮಿಷನ್ ಅಡಿ ಕೇರಳಕ್ಕೆ ಕೊಲ್ಲಿ ದೇಶಗಳಿಂದ ಅನೇಕ ವಿಮಾನಗಳು ಬಂದಿದ್ದು ಆದರೆ ಕೇವಲ 50 ವಿಮಾನಗಳು ಮಂಗಳೂರಿಗೆ  ಬಂದಿದ್ದವು. ಇದೀಗ ವಿಮಾನ ಸೇವೆ ಭಾರತದ  ಹಾಗೂ ಬೇರೆ ಬೇರೆ ದೇಶಗಳಿಂದ ಬರುವವರಿಗೆ  ಸೇವೆ ಒದಗಿಸುವ ಸಲುವಾಗಿ ಈ ಎಲ್ಲಾ ಅಂಶಗಳನ್ನು ಟ್ವಿಟರ್ ಅಭಿಯಾನದಲ್ಲಿ ತಿಳಿಸಲಾಗಿದೆ

More from the blog

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...

ಸಜೀಪ : ಜ.28, 29,30ರಂದು ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್

ಬಂಟ್ವಾಳ : ಜಲಾಲಿಯ್ಯಾ ಜುಮಾ ಮಸ್ಜಿದ್, ಚಟ್ಟೆಕ್ಕಲ್, ಸಜಿಪ ಇದರ ಆಶ್ರಯದಲ್ಲಿ ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್ ಬುರ್ದಾ ಮಜ್ಲಿಸ್ ಜಿಸ್ತಿಯಾ ಖುತ್‌ಬಿಯತ್ ಜ.28, 29,30 ರಂದು ಜಲಾಲಿಯ್ಯ ಜುಮಾ ಮಸೀದಿ...

ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ – ಒಡಿಯೂರುಶ್ರೀ

ವಿಟ್ಲ: ಸದೃಢ ದೇಶ ನಿರ್ಮಾಣದಲ್ಲಿ ಸೈನಿಕರ ಪರಿಶ್ರಮ, ತ್ಯಾಗ ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ. ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಒಡಿಯೂರು ರಾಜಾಂಗಣದಲ್ಲಿ...