Tuesday, January 27, 2026

ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ಇನ್ನು ನೆನಪು ಮಾತ್ರ

ಮಂಗಳೂರು: ಇಲ್ಲಿನ ಕೇಂದ್ರ ಭಾಗವಾಗಿದ್ದ ಸೆಂಟ್ರಲ್ ಮಾರ್ಕೆಟ್ ಇನ್ನು ನೆನಪು ಮಾತ್ರ. ಸುಮಾರು 50 ವರ್ಷಗಳ ಇತಿಹಾಸವಿರುವ ಈ ಮಾರುಕಟ್ಟೆಯನ್ನು ತೆರವು ಮಾಡಲು ಮಂಗಳೂರು ಮಹಾನಗರ ಪಾಲಿಕೆ ನಿರ್ಧರಿಸಿದೆ. ಅದರ ಜೊತೆಗೆ ಪಕ್ಕದ ತರಕಾರಿ ಮತ್ತು ಮೀನು ಮಾರುಕಟ್ಟೆಯನ್ನು ಕೂಡಾ ಮುಚ್ಚಲು ನಿರ್ಧರಿಸಲಾಗಿದೆ. ಎರಡೂ ಕಟ್ಟಡಗಳು ತೀರ ಶಿಥಿಲಾವಸ್ಥೆಯಲ್ಲಿದ್ದು ಯಾವುದೇ ಕ್ಷಣದಲ್ಲೂ ಕುಸಿದು ಬೀಳುವ ಹಂತದಲ್ಲಿದೆ. ಆದ್ದರಿಂದ ನೆಲಸಮಗೊಳಿಸಿ ಆ ಸ್ಥಳದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.

ಮಂಗಳೂರಿನಲ್ಲಿ ಲಾಕ್ ಡೌನ್ ಸಂದರ್ಭ ಕೊರೋನ ಸೋಂಕು ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂಬ ನಿಯಮವಿದೆ. ಆದರೆ ಈ ಮಾರುಕಟ್ಟೆಯಲ್ಲಿ ಕೊರೋನ ಸೋಂಕು ತಡೆಗಟ್ಟಲು ಸಾದ್ಯವಾಗದ ಕಾರಣ ಆತಂಕ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿನ ವ್ಯಾಪಾರಿಗಳಿಗೆ ಬೈಕಂಪಾಡಿಯಲ್ಲಿರುವ ಎಪಿಎಂಸಿ ಮಾರುಕಟ್ಟೆಗೆ ಸ್ಥಳಾಂತರಿಸಲಾಗಿತ್ತು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...