Tuesday, January 27, 2026

ಮಂಗಳೂರು: ಮತ್ತೆ 13 ಮಂದಿಯ ಗಡೀಪಾರು

ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ಉದ್ದೇಶದಿಂದ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಮತ್ತೆ 13 ಮಂದಿ ಅಪರಾಧ ಹಿನ್ನೆಲೆಯವರನ್ನು ಗಡೀಪಾರು ಮಾಡಿ ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಬೋಳಾರದ ಜ್ಞಾನೇಶ್‌ ನಾಯಕ್‌, ಕುದ್ರೋಳಿಯ ಫ‌ಹಾದ್‌, ಉಳ್ಳಾಲ ಮೊಗವೀರ ಪಟ್ಣದ ಧನುಷ್‌ ಆಲಿಯಾಸ್‌ ರಮಿತ್‌ ರಾಜ್‌, ಕಾವೂರಿನ ಮೊಹಮ್ಮದ್‌ ಸುಹೇಬ್‌, ಮೂಡುಶೆಡ್ಡೆಯ ದೀಪಕ್‌ ಆಲಿಯಾಸ್‌ ದೀಪು, ಕಾಟಿಪಳ್ಳ ಕೃಷ್ಣಾಪುರದ ಸಾಹಿಲ್‌ ಇಸ್ಮಾಯಿಲ್‌, ಉಳ್ಳಾಲ ಬಸ್ತಿಪಡು³ವಿನ ಮೊಹಮ್ಮದ್‌ ಶಕೀರ್‌, ಉಳ್ಳಾಲ ಮೇಲಂಗಡಿಯ ಇಬ್ರಾಹಿಂ ಖಲೀಲ್‌, ಕುದ್ರೋಳಿಯ ಧನುಷ್‌, ಬಜಾಲ್‌ ನಂತೂರಿನ ನೌಫಾಲ್‌ ಆಲಿಯಾಸ್‌ ಟೊಪ್ಪಿ ನೌಫಾಲ್‌, ಮರೋಳಿಯ ಹವಿತ್‌ ಪೂಜಾರಿ, ಅರ್ಕುಳದ ಕೌಶಿಕ್‌ ನಿಹಾಲ್‌ ಮತ್ತು ಬೆಳುವಾಯಿಯ ಸಂತೋಷ್‌ ಶೆಟ್ಟಿ ಅವರನ್ನು ಗಡೀಪಾರು ಮಾಡಲಾಗಿದೆ.

ಚುನಾವಣೆ ಹಿನ್ನೆಲೆಯಲ್ಲಿ ಇದುವರೆಗೆ ಒಟ್ಟು 51 ಮಂದಿಯನ್ನು ಗಡೀಪಾರು ಮಾಡಿದಂತಾಗಿದೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಲಕ್ಷ್ಮೀ ಪ್ರಸಾದ್ ಬೊಟ್ಯಾಡಿ ವಿರುದ್ಧ FIR

  ಇತ್ತೀಚೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಭವಿಷ್ಯತ ಅಭ್ಯರ್ಥಿಯಾಗಿ ಹೆಸರು ಮುನ್ನೆಲೆಗೆ ಬಂದಿದ್ದ ಲಕ್ಷ್ಮಿ ಪ್ರಸಾದ್ ಬೊಟ್ಯಾಡಿ ವಿರುದ್ಧ FIR ದಾಖಲಾಗಿರುವುದು ಪುತ್ತೂರಿನ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಜ.21 ರಂದು ಹಿಂದೂ ಮುಖಂಡ...

ಕಟೀಲು 7 ಮೇಳಗಳ ಜ.22ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.22ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.22ರ ಸೇವೆಯಾಟಗಳ ವಿವರ : ಅಪ್ಪಿ ಶೆಡ್ತಿ, ಕಲ್ಲಂಜೆ ಬಾಳಿಕೆ, ಸೂರಿಂಜೆ,...

ಶಿಕ್ಷಣ ಸಂಸ್ಥೆಗಳ ಪರಿಸರದ ಅಂಗಡಿಗಳ ತಪಾಸಣೆ ತೀವ್ರಗೊಳಿಸಲು ಜಿಲ್ಲಾಧಿಕಾರಿ ಸೂಚನೆ..

ಮಂಗಳೂರು : ಶಾಲಾ ಕಾಲೇಜುಗಳ ಸುತ್ತಮುತ್ತ ಕಾರ್ಯಾಚರಿಸುವ ಅಂಗಡಿಗಳಲ್ಲಿ ಮಾದಕ ವಸ್ತು ಮತ್ತು ಧೂಮಪಾನ ಮಾರಾಟದ ಬಗ್ಗೆ ನಿರಂತರ ತಪಾಸಣೆ ನಡೆಸುವಂತೆ ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚನೆ ನೀಡಿದ್ದಾರೆ. ನಾರ್ಕೋ ಕೋ ಆರ್ಡಿನೇಶನ್ ಸೆಂಟರ್‌ನ...