Friday, June 27, 2025

ಬಸ್ ನಿರ್ವಾಹಕ ರಕ್ಷಾ ಕವಚ ಧರಿಸಿ ಕರ್ತವ್ಯ ನಿರ್ವಹಣೆ

ಮಂಗಳೂರು: ಕೊರೊನಾ ಹುಟ್ಟಿಸಿದ ಭಯದ ನಡುವೆ ಜನಜೀವನ ನಿಧಾನವಾಗಿ ಸಹಜತೆಯತ್ತ ತೆರೆದುಕೊಳ್ಳುತ್ತಿದೆ. ಜೂ.1 ರಿಂದ ನಗರದಲ್ಲಿ ಬಸ್ಸು ಸಂಚಾರ ಆರಂಭವಾಗಿದ್ದು, ಇದಕ್ಕಾಗಿ ನಗರದಲ್ಲಿ ಕರ್ತವ್ಯ ನಿರ್ವಹಿಸುವ ಕೆಲ ಖಾಸಗಿ ಬಸ್ ನಿರ್ವಾಹಕರು ಸಾಂಕ್ರಮಿಕ ರೋಗ ಕೋವಿಡ್ – 19 ನಿಂದ ರಕ್ಷಣೆಗಾಗಿ ರಕ್ಷಾ ಕವಚ ಧರಿಸಿ ಕರ್ತವ್ಯ ನಿರ್ವಹಿಸಲು ಮುಂದಾಗಿದ್ದಾರೆ.
ಸ್ಟೇಟ್ ಬ್ಯಾಂಕ್‌- ಶಕ್ತಿನಗರ ಮಾರ್ಗವಾಗಿ ತೆರಳುವ ರೂಟ್ ನಂಬ್ರ 6ಎ ನಗರ ಸಂಚಾರದ ಬಸ್ಸಿನ ಕಂಡೆಕ್ಟರ್ ಕೊರೊನಾ ರೋಗದಿಂದ ರಕ್ಷಣೆ ಪಡೆಯಲೆಂದು ಪಿಪಿಇ ಕಿಟ್ ಮಾದರಿಯಲ್ಲಿ ರಕ್ಷಣಾ ಕವಚ ಅಳವಡಿಸಿಕೊಂಡಿದ್ದಾರೆ.
ಕೈಗವಸು, ಆರೋಗ್ಯ ತಪಾಸಣೆ, ಮಾಸ್ಕ್ ಹಾಕಿ ಕರ್ತವ್ಯ ನಿರ್ವಹಿಸಲು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸೂಚಿಸಿದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ಬಸ್ಸಿನ ನಿರ್ವಾಹಕರು ಕೋವಿಡ್ ರಕ್ಷಣಾ ಕವಚ ಧರಿಸಿ ಕರ್ತವ್ಯ ನಿರ್ವಹಿಸುತ್ತಿರುವುದಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ ಎಂದು ವರದಿಯಾಗಿದೆ.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...