ಮಂಗಳೂರು: ಕರ್ನಾಟಕ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.


ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಶನಿವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ಶನಿವಾರದಿಂದ ಸೋಮವಾರದವರೆಗೆ ಪ್ರತಿದಿನ 200 ಮಿಲಿ ಮೀಟರ್ ಗಿಂತ ಮೇಲ್ಪಟ್ಟು ಮಳೆಯಾಗುವ ನಿರೀಕ್ಷೆಯಿದ್ದು, ಮೀನುಗಾರರು ಕಡ್ಡಾಯವಾಗಿ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಭಾರಿ ಮಳೆಯ ಹಿನ್ನಲೆಯಲ್ಲಿ ತುರ್ತು ಸೇವೆಗಾಗಿ ಟೋಲ್ ಫ್ರೀ ಸಂಖ್ಯೆ ನೀಡಲಾಗಿದೆ. ತುರ್ತು ಸೇವೆಯ ಕಂಟ್ರೋಲ್ ರೂಮ್ 24*7 ಕಾರ್ಯನಿರ್ವಹಿಸಲಿದೆ.
ಕಂಟ್ರೋಲ್ ರೂಮ್ – 1077
ವ್ಯಾಟ್ಸಪ್ ಸಂಖ್ಯೆ; 9483908000