ಮಂಗಳೂರು: ಪ್ರಿಯಕರನನ್ನು ನೋಡಲು ಫ್ರೀ ಬಸ್ನಲ್ಲಿ ಬಂದ ಪ್ರಿಯತಮೆ ನಾಪತ್ತೆಯಾಗಿರುವ ಘಟನೆ ಪುತ್ತರಿನಲ್ಲಿ ನಡೆದಿದೆ.

ನಾಪತ್ತೆಯಾದ ಮಹಿಳೆಯು ಹುಬ್ಬಳ್ಳಿ ನಿವಾಸಿಯಾಗಿದ್ದು, ಈಕೆಗೆ 11 ತಿಂಗಳ ಮಗು ಇದೆ. ವಿವಾಹಿತ ಮಹಿಳೆ ಹಾಗೂ ಪುತ್ತೂರಿನ ಯುವಕನ ನಡುವೆ ಪ್ರೀತಿ ಶುರುವಾಗಿತ್ತು. ಆದರೆ ಯುವತಿಯ ಕುಟುಂಬಸ್ಥರು ಬೇರೆ ಯುವಕನ ಜೊತೆ ಮದುವೆ ಮಾಡಿಸಿದ್ದಾರೆ.
ಗಂಡನ ಮನೆಯಲ್ಲಿ ಆಧಾರ್ ಲಿಂಕ್ ಮಾಡಿ ಬರುತ್ತೇನೆಂದು ಮನೆಯಿಂದ ಹೊರ ಹೋಗಿದ್ದ ಮಹಿಳೆಯು ಆಧಾರ್ ಕಾರ್ಡ್ಅನ್ನು ಬಸ್ಸಿನಲ್ಲಿ ತೋರಿಸಿ ಉಚಿತವಾಗಿ ಹುಬ್ಬಳ್ಳಿಯಿಂದ ಪುತ್ತೂರಿಗೆ ಪ್ರಯಾಣಿಸಿದ್ದಾಳೆ. ವಿಷಯ ತಿಳಿದ ಕೂಡಲೇ ಆಕೆಯ ಗಂಡನ ಮನೆಯವರು ಹಾಗೂ ಮಹಿಳೆಯ ಮನೆಯವರು ರಾತ್ರೋ ರಾತ್ರಿ ಪುತ್ತೂರಿನಲ್ಲಿ ಹುಡುಕಾಟ ನಡೆಸಿದ್ದಾರೆ. ಈ ಘಟನೆ ಸಂಬಂಧ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಬದಿನಾರ್ ಎಂಬುವವರು, ಎಸ್ಕೇಪ್ ಆಗಿದ್ದ ವಿವಾಹಿತ ಮಹಿಳೆಯ ಕುಟುಂಬಸ್ಥರಿಗೆ ಧೈರ್ಯ ಹೇಳಿ, ನೆರವು ನೀಡಿದ್ದಾರೆ.

