Monday, February 2, 2026

*ಮಾಣಿ ಗ್ರಾಮದ ಕಾಪಿಕಾಡಿನಲ್ಲಿ ಅಪರಿಚಿತ ಇಬ್ಬರು ವ್ಯಕ್ತಿಳಿಂದ ಕಳ್ಳತನ ಕ್ಕೆ ಸಂಚು-ಆರೋಪ* ಮಾಣಿಯಲ್ಲಿ ಪೋಲಿಸ್ ಔಟ್ ಪೋಸ್ಟ್ ನಿರ್ಮಾಣ ಮಾಡಲು ಸಾರ್ವಜಕರ ಒತ್ತಾಯ*

ಬಂಟ್ವಾಳ: ಕೊರೋನ ಸೋಂಕು ಕಡಿವಾಣ ಕ್ಕೆ ರಾಜ್ಯ ದಲ್ಲಿ ಲಾಕ್ ಡೌನ್ ಜಾರಿಯಲ್ಲಿರುವ ಈ ಸಮಯದಲ್ಲಿ ಅಪರಿಚಿತ ವ್ಯಕ್ತಿಗಳಿಬ್ಬರು ಅನುಮಾನಾಸ್ಪದವಾಗಿ ಅಕ್ಟಿವಾ ಸ್ಕೂಟರಲ್ಲಿ ತಿರುಗಾಡಿ ಕಳ್ಳತನ ಕ್ಕೆ ಹೊಂಚು ಹಾಕುತ್ತಿದ್ದ ಘಟನೆ ನಿನ್ನೆ ರಾತ್ರಿ ವೇಳೆಯಲ್ಲಿ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಕಾಪಿಕಾಡುವಿನಲ್ಲಿ ನಡೆದಿದೆ.ವಿಟ್ಲ ಪೋಲೀಸ್ ಠಾಣೆಯ ಸರಹದ್ದಿನಲ್ಲಿ ಬರುವ

ಮಾಣಿಯಲ್ಲಿ ಪೋಲಿಸ್ ಪೋಲೀಸ್ ಹೊರಠಾಣೆ ನಿರ್ಮಾಣ ಮಾಡಲು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ. ಎರಡು ಹೆದ್ದಾರಿಗಳು ಸೇರುವ ಮಾಣಿ ಜಂಕ್ಷನ್ ನಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳ ಕಾಕರ ಕಾಟ ಜಾಸ್ತಿ ಆಗಿದೆ.ಗೂಡಂಗಡಿಗಳಲ್ಲಿ ಸಣ್ಣ ಪುಟ್ಟ ಕಳ್ಳತನ,ವಂಚನೆ ಪ್ರಕರಣ ಈ ಹಿಂದಿನಿಂದಲೂ ಆಗುತ್ತಿರುತ್ತದೆ.ಆದರೆ ಸಣ್ಣ ಪುಟ್ಟ ಕಳ್ಳತನ ಪೋಲೀಸ್ ಠಾಣೆಯ ಮೆಟ್ಟಲು ಹತ್ತುವುದೇ ಇಲ್ಲ.ಈ ಒಂದು ಸಾರ್ವಜನಿಕರ ದೌರ್ಬಲ್ಯ ವೇ ಕಳ್ಳಕಾಕರಿಗೆ ವರದಾನವಾಗಿದೆ ಎಂದು ತಿಳಿದು ಬಂದಿದೆ. ಇನ್ನು ಮುಂದೆ ಈ ಬಗ್ಗೆ ಪೋಲೀಸರು ಯಾವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಾರೆ ಎಂಬುದು ಸದ್ಯ ದ ಕುತೂಹಲ.ಆದರೂ ಸಾರ್ವಜನಿಕರು ಬಹಳ ಎಚ್ಚರಿಕೆಯಿಂದ ಇರುವುದು ಉತ್ತಮ ಎನ್ನಲಾಗಿದೆ.

ಸ್ವಾತಂತ್ರ್ಯ ಪೂರ್ವ ದಲ್ಲಿ ಮಾಣಿಯಲ್ಲಿ ಪೋಲಿಸ್ ಚೌಕಿ ಇತ್ತು.ಕೆಲವು ದಶಕಗಳ ಹಿಂದೆ ಕೂಡ ಇತ್ತು. ಆದರೆ ಈಗ ಇಲ್ಲ .ಕಾರಣ ಯಾವುದೆಂದು ತಿಳಿದು ಬಂದಿಲ್ಲ. ರಾಜಕೀಯ ನಾಯಕರ ಇಚ್ಚಾ ಶಕ್ತಿ ಯ ಕೊರತೆಯಿಂದ ಮಾಣಿಯಲ್ಲಿ ಪೋಲಿಸ್ ಔಟ್ ಪೋಸ್ಟ್ ನಡೆಯಲಿಲ್ಲ ಎಂದು ಸಾರ್ವಜನಿಕರು ದೂರಿಕೊಂಡಿದ್ದಾರೆ.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...