Thursday, February 13, 2025

ಮಾಣಿ ಶ್ರೀ ಉಳ್ಳಾಲ್ತಿ ಮೆಚ್ಚಿ ಗೆ ಚಪ್ಪರ ಮುಹೂರ್ತ

ಬಂಟ್ವಾಳ: ಫೆ.6 ರಂದು ನಡೆಯಲಿರುವ ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಮೆಚ್ಚಿ ಜಾತ್ರೆಯ ಪ್ರಯುಕ್ತ ಪೂರ್ವಭಾವಿ ಯಾಗಿ ಮಾಣಿ ಉಳ್ಳಾಲ್ತಿ ದೈವಸ್ಥಾನದ ಅಂಗಣಕ್ಕೆ ಚಪ್ಪರ ಮುಹೂರ್ತ ಇಂದು ಬೆಳಿಗ್ಗೆ ಸುಮಾರು ಹತ್ತು ಗಂಟೆಯ ವೇಳೆ ನಡೆಯಿತು.


ಪಳನೀರು ಅನಂತ ಭಟ್ ಅವರ ಪೌರೋಹಿತ್ಯ ದಲ್ಲಿ ವಿಧಿಬದ್ದವಾಗಿ ಚಪ್ಪರ ಮೂಹೂರ್ತ ನಡೆದ ಬಳಿಕ ಮಾಣಿ ಉಳ್ಳಾಲ್ತಿ ಮೆಚ್ಚಿ ಗೆ ಅಣಿ ಕಟ್ಟಲು ಬೇಕಾಗುವ ಅಡಿಕೆ ಹಾಲೆಯನ್ನು ತರಲು ಸಂಪ್ರದಾಯದ ಂತೆ ಕೆದಿಲ ಮನೆಗೆ ತೆರಳಿ , ಅಲ್ಲಿಂದ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿ ಒಂದೇ ಅಡಿಕೆ ಮರದಿಂದ ಒಂದು ಹಾಲೆ ಹಿಂಗಾರ, ಒಂದು ಕಿಲೆ ಅಡಿಕೆ, ಒಂದು ಅಡಿಕೆ ಹಾಲೆಯನ್ನು ತೆಗೆದು ಮೂಹೂರ್ತ ಮಾಡಲಾಗುತ್ತದೆ, ಬಳಿಕ ಬೇಕಾಗುವಷ್ಟು ಹಾಲೆಯನ್ನು ಸಂಗ್ರಹಿಸಲಾಗುತ್ತದೆ.
ಅಲ್ಲಿಂದ ತರಿಸಲಾದ ಹಾಲೆಗೆ ಪೌರೋಹಿತ್ಯ ನಡೆದ ಬಳಿಕ ಬಾಕಿಮಾರು ಗದ್ದೆಯಲ್ಲಿ ಪ್ರಥಮ ಚೆಂಡು ಇಂದು ನಡೆಯಿತು.
ಇಂದಿನಿಂದ ಮೂರು ದಿನಗಳ ಕಾಲ ಬಾಕಿಮಾರು ಗದ್ದೆಯಲ್ಲಿ ಚೆಂಡು ಹಾಕುವ ಕಾರ್ಯ ಕ್ರಮ ಸಂಪ್ರದಾಯದಂತೆ ನಡೆಯುತ್ತದೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...