Tuesday, February 11, 2025

ಫೆ.19-21: ಮಾಣಿಲ ಕುಕ್ಕಾಜೆ ಕ್ಷೇತ್ರದಲ್ಲಿ 52ನೇ ವಾರ್ಷಿಕ ಜಾತ್ರಾ ಮಹೋತ್ಸವ

ವಿಟ್ಲ: ಮಾಣಿಲ ಗ್ರಾಮದ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ಶ್ರೀದೇವಿಯ 52ನೇ ವರ್ಷದ ವಾರ್ಷಿಕ ಜಾತ್ರಾ ಮಹೋತ್ಸವ ಫೆ. 19ರಿಂದ 21ರ ವರೆಗೆ ನಡೆಯಲಿದೆ.
19ರಂದು ಸ್ಥಳಶುದ್ಧಿ, ಗಣಪತಿ ಹೋಮ, ಶ್ರೀದೇವಿಯ ಕಲಶ ಪ್ರತಿಷ್ಠೆ, ಉದಯ ಪೂಜೆ, ಹಾಗೂ ವಿವಿಧ ಭಜನೆ ತಂಡಗಳಿಂದ ಭಜನೆ ನಡೆಯಲಿದೆ.
20ರಂದು ಶ್ರೀ ಚೇವಾರು ಶಂಕರ ಕಾಮತರ ನೇತೃತ್ವದಲ್ಲಿ ಶೃತಿಲಯ ಚೇವಾರು ಅವರಿಂದ ಭಾವಗಾನ ಸಂಗಮ ನಡೆಯಲಿದೆ. ಮಧ್ಯಾಹ್ನ ಶ್ರೀದೇವಿಯ ಮಹಾಪೂಜೆ, ಬಲಿ ಉತ್ಸವ, ಪಲ್ಲಕ್ಕಿ ಉತ್ಸವ, ಅಲಂಕಾರ ಪೂಜೆ ನಡೆಯಲಿದೆ.

ಫೆ.21 ರಂದು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿ ಮಣಿಯಂಪಾರೆ ಅವರಿಂದ ಕುಣಿತ ಭಜನೆ, ದರ್ಶನ ಬಲಿ ಉತ್ಸವ, ಪ್ರಸಾದ ವಿತರಣೆ ನಡೆಲಿದೆ. ಸಂಜೆ ಧಾರ್ಮಿಕ ಸಭೆಯಲ್ಲಿ ಶ್ರೀಧಾಮ ಮಾಣಿಲ ಕ್ಷೇತ್ರದ ಪರಮಹಂಸ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಪೆರುವಾಯಿ ಮುಚ್ಚಿರಪದವು ಫಾತಿಮಾ ಮಾತೆಯ ದೇವಾಲಯದ ಧರ್ಮಗುರು ವಿಶಾಲ್ ಮೋನಿಸ್, ಕ್ಷೇತ್ರದ ಧರ್ಮದರ್ಶಿ ಶ್ರೀ ಕೃಷ್ಣ ಗುರೂಜಿ ದಿವ್ಯ ಉಪಸ್ಥಿತಿ ಇರಲಿದ್ದಾರೆ.

ಇದೇ ಸಂದರ್ಭದಲ್ಲಿ ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹಾಗೂ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕುಮಾರ್ ಕಾಫಿನಡ್ಕ ಅವರಿಗೆ ಸನ್ಮಾನ ನಡೆಯಲಿದೆ.

ಬೈಕುಂಜ ಗೋಳಿತ್ತಡ್ಕದ ರಾಜೇಶ್ ಶಂಕರ್ ಭಟ್, ಅಶ್ವಥ್ ಪೂಜಾರಿ ಲಾಲ್‌ಬಾಗ್, ಸಂದೇಶ್ ಪೂಜಾರಿ, ಆನಂದ ನಾಯ್ಕ, ವಿಟ್ಲ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಅರುಣ್ ಎಂ ವಿಟ್ಲ, ಮಾಣಿಲ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ್ ಕುಮಾರ್ ಬಾಳೆಕಲ್ಲು, ಸಾಹಿತಿ ತೋಡಿಕಾನ ಅಬ್ದುಲ್ಲ, ಸಪ್ತ ಪಾವೂರು, ಕ್ಷೇತ್ರದ ಮೊಕ್ತೇಸರ ಎಂ.ಕೆ ಕುಕ್ಕಾಜೆ, ಮೊದಲಾದವರು ಭಾಗವಹಿಸಲಿದ್ದಾರೆ.

More from the blog

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...