Wednesday, February 12, 2025

ಮಣಿನಾಲ್ಕೂರು: ಕೃಷಿ ಉತ್ಪನ್ನ ಮಾರುಕಟ್ಟೆ ಕಟ್ಟಡಕ್ಕೆ ಶಿಲಾನ್ಯಾಸ

ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ನಬಾರ್ಡ್ ಯೋಜನೆಯಡಿ 25ಲಕ್ಷ ರೂ. ಅನುದಾನದಲ್ಲಿ ಮಣಿನಾಲ್ಕೂರುವಿನಲ್ಲಿ ಸಂತೆ ಮಾರುಕಟ್ಟೆ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಗುರುವಾರ ಜರಗಿತು.
ಬಂಟ್ವಾಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಕೆ. ಪದ್ಮನಾಭ ರೈ ಅವರು ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾರುಕಟ್ಟೆ ಸಮಿತಿ ಉಪಾಧ್ಯಕ್ಷ ಚಂದ್ರಶೇಖರ ಕೋರ್ಯ, ಸದಸ್ಯರಾದ ಚಂದ್ರಶೇಖರ ರೈ, ಹರಿಶ್ಚಂದ್ರ ಪೂಜಾರಿ, ಕಾಂಚಲಾಕ್ಷಿ, ಅಲೋನ್ಸ್ ಮೆನೆಜಸ್, ತಾ.ಪಂ.ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಎಪಿಎಂಸಿ ಕಾರ್ಯದರ್ಶಿ ಭಾರತಿ ಎಸ್., ಶಮಂತ್ ಕುಮಾರ್, ಮಣಿನಾಲ್ಕೂರು ಗ್ರಾ.ಪಂ.ಅಧ್ಯಕ್ಷೆ ಗೀತಾ ಶ್ರೀಧರ ಪೂಜಾರಿ, ಉಪಾಧ್ಯಕ್ಷ ದಿನೇಶ್, ಸದಸ್ಯರಾದ ಆದಂ ಕುಂಞ, ಡೆನ್ನಿಸ್ ಮೊರಾಸ್, ಪದ್ಮಾವತಿ, ಯಶೋದಾ, ಪ್ರಮುಖರಾದ ಉಮೇಶ್ ಆಳ್ವ ಕೊಟ್ರಿಂಜ, ಬಾಲಕೃಷ್ಣ ಪೂಜಾರಿ, ಪುರುಷೋತ್ತಮ ಪೂಜಾರಿ ಮಜಲು, ರಿಚಾರ್ಡ್ ಡಿಸೋಜ ಸರಪಾಡಿ, ಪೂವಪ್ಪ ಪೂಜಾರಿ, ಯೋಗೀಶ್ ಶೆಟ್ಟಿ ಆರುಮುಡಿ, ಸಂಜೀವ ಗಂಡಿ, ಹೈದರ್ ಅಜಿಲಮೊಗರು ಉಪಸ್ಥಿತರಿದ್ದರು.

 

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...