Friday, June 27, 2025

ಮರ ಬಿದ್ದು ಕಾಲೇಜು ವಿದ್ಯಾರ್ಥಿನಿಗೆ ಗಾಯ

ಬಂಟ್ವಾಳ: ಅರಣ್ಯ ಇಲಾಖೆಯ ಸಮೀಪವೇ ಮರ ಬಿದ್ದು ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಕಾಲಿಗೆ ಗಾಯಗಳಾಗಿ ಆಸ್ಪತ್ರೆ ಗೆ ದಾಖಲಾದ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಬೋರುಗುಡ್ಡೆ ಎಂಬಲ್ಲಿ ಇಂದು ಸಂಜೆ 4.30 ರ ವೇಳೆ ನಡೆದಿದೆ.


ಕಾಮಾಜೆ ನಿವಾಸಿ ಸೇಸಪ್ಪ ಮೂಲ್ಯ ಅವರ ಮಗಳು ಶಾಲಿನಿ ಮರ ಬಿದ್ದು ಕಾಲಿಗೆ ಗಾಯಗೊಂಡ ವಿದ್ಯಾರ್ಥಿ ನಿ.
ಬಿಸಿರೋಡು ಧರ್ಮಸ್ಥಳ ರಸ್ತೆಯಲ್ಲಿ ಬಿಸಿರೋಡಿನಿಂದ ಒಂದು ಕಿ.ಮೀ ಕ್ರಮಿಸಿದಾಗ ಕಾಮಾಜೆಗೆ ತಿರುಗುವ ಸ್ಥಳ ಬೋರುಗುಡ್ಡೆ ಎಂಬಲ್ಲಿ ನಡೆದುಕೊಂಡು ಹೋಗುವ ವೇಳೆ ಘಟನೆ ನಡೆದಿದೆ.
ಶಾಲಿನಿ ಅವರು ಬಿಸಿರೋಡಿನ ಗೂಡಿನಬಳಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಪ್ರಥಮ ಪಿ.ಯು.ಸಿ.ವಿದ್ಯಾರ್ಥಿ ನಿ.
ಸಂಜೆ ವೇಳೆ ಇವಳು ಮನೆಗೆ ನಡೆದುಕೊಂಡು ಹೋಗುವ ವೇಳೆ ಹಠಾತ್ ಆಗಿ ಮರ ಬಿದ್ದು ಅದರ ರೆಂಬೆ ಇವಳ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅವಳು ಬಿಸಿರೋಡಿನ ಖಾಸಗಿ ಆಸ್ಪತ್ರೆ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ಧಾಳೆ ಎಂದು ಸ್ಥಳೀಯ ರು ತಿಳಿಸಿದ್ದಾರೆ.

ಮಾಹಿತಿ ತಿಳಿದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಅರ್.ಅವರು ಸ್ಥಳಕ್ಕೆ ಬೇಟಿ ನೀಡಿ ಅಗ್ನಿ ಶಾಮಕ ದಳ ಹಾಗೂ ಪೋಲೀಸರನ್ನು ಕರೆಸಿ ಮರ ತೆರವು ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರು.

ಮರ ಬಿದ್ದು ಕಾಮಾಜೆ ಕಡೆಗೆ ತೆರಳಲು ಅಸಾಧ್ಯ ವಾಗಿದ್ದರಿಂದ ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳವದವರು ಮರ ತೆರವು ಮಾಡಿದ್ದಾರೆ, ಜೊತೆಗೆ ಅಲ್ಲಿ ಬೀಳುವ ಹಂತದಲ್ಲಿ ದ್ದ ಮತ್ತೊಂದು ಮರವನ್ನು ಕೂಡಾ ತೆರವು ಮಾಡಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಎಸ್. ಐ ಚಂದ್ರಶೇಖರ್ ಹಾಗೂ ಸಿಬ್ಬಂದಿ ಗಳು ಬೇಟಿ ನೀಡಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...