Monday, January 26, 2026

ಅಕ್ರಮ ಮರಳು ಅಡ್ಡೆಗೆ ಎ.ಎಸ್.ಪಿ.ಸೈದುಲು ಅಡಾವತ್ ದಾಳಿ ಕೋಟ್ಯಾಂತರ ರೂ ಮೌಲ್ಯದ ಸೊತ್ತುಗಳ ವಶ

ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿದ ಎ.ಎಸ್.ಪಿ.ಸೈದುಲ್ ಅಡಾವತ್ ಕೋಟ್ಯಾಂತರ ರೂ ಮೌಲ್ಯದ ಸೊತ್ತುಗಳ ವಶಪಡಿಸಿಕೊಂಡ ಘಟನೆ ಪುದು ಗ್ರಾಮದ ಸುಜೀರ್ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಬಂಟ್ವಾಳ ತಾಲೂಕು ಪುದು ಗ್ರಾಮದ ಸುಜೀರ್ ಎಂಬಲ್ಲಿ ಹಿಟಾಚಿ ಮತ್ತು ಟಿಪ್ಪರ್ ಗಳನ್ನು ಬಳಸಿ ನೇತ್ರಾವತಿ ನದಿಯ ಹಿನ್ನೀರಿನಿಂದ ಅಕ್ರಮವಾಗಿ ಮರಳು ತೆಗೆದು ಅದನ್ನು ಫಿಲ್ಟರ್ ಮಾಡಿ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ ಎ.ಎಸ್.ಪಿ.ತಂಡ ಕೋಟ್ಯಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಗೆ ಹಸ್ತಾಂತರ ಮಾಡಲಾಗಿದೆ.

ದಾಳಿಯ ಸಂದರ್ಭದಲ್ಲಿ ಸ್ಥಳದಲ್ಲಿದ್ದ 3 ಟಿಪ್ಪರ್ ಲಾರಿಗಳು ಇದರ ಅಂದಾಜು ಮೌಲ್ಯ 24,00,000/-, L & T ಕಂಪೆನಿಯ ಒಂದು ಹಿಟಾಚಿ ಇದರ ಅಂದಾಜು ಮೌಲ್ಯ 55,00,000/-, Kobelco ಕಂಪೆನಿಯ ಒಂದು ಹಿಟಾಚಿ, ಇದರ ಅಂದಾಜು ಮೌಲ್ಯ 80,00,000/-, ಒಂದು ಗ್ರೀನ್ ವಿಕ್ ಕಂಪೆನಿಯ ಜನರೇಟರ್ ಇದರ ಅಂದಾಜು ಮೌಲ್ಯ 6,00,000/-, ಮರಳು ಫಿಲ್ಟರ್ ಮಾಡುವ ಯುನಿಟ್ ಇದರ ಅಂದಾಜು ಮೌಲ್ಯ 80,000/-, 35 ಲೋಡ್ ಮರಳು ಇದರ ಅಂದಾಜು ಮೌಲ್ಯ 1,10,000/- ಗಳನ್ನು ವಶಕ್ಕೆ ಪಡೆದಿದ್ದು, ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿರುತ್ತದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ 1 ಕೋಟಿ 65 ಲಕ್ಷ ಆಗಿರುತ್ತದೆ.

ದಾಳಿಯನ್ನು ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಸೈದುಲ್ ಅದಾವತ್ ರವರ ತಂಡ ನಡೆಸಿದ್ದು, ಬಂಟ್ವಾಳ ವೃತ್ತ ನಿರೀಕ್ಷಕರಾದ ಶರಣೆ ಗೌಡ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ. ಎಂ.ಎಸ್, ಸಿಬ್ಬಂದಿಯವರುಗಳಾದ ಹನುಮಂತ, ಉಮೇಶ, ಕುಮಾರ್, ನಝೀರ್, ನಾಗನಾಥ್, ಅಜಿತ್ ಬಂಗೇರಾ, ಕಿರಣ್ ಪಾಲ್ಗೊಂಡಿರುತ್ತಾರೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...