Friday, July 4, 2025

ಮಾರ್ಚ್ 31, ಭಾನುವಾರ ಬ್ಯಾಂಕ್​​ಗಳಿಗೆ ರಜೆ ರದ್ದು

ನವದೆಹಲಿ: ಸರ್ಕಾರದ ವಹಿವಾಟುಗಳನ್ನು ನಿರ್ವಹಿಸುತ್ತಿರುವ ಎಲ್ಲಾ ಏಜೆನ್ಸಿ ಬ್ಯಾಂಕುಗಳೂ ಹಣಕಾಸು ವರ್ಷದ ಕೊನೆ ದಿನವಾದ ಮಾರ್ಚ್ 31, ಭಾನುವಾರದಂದು ತೆರೆದಿರಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶನ ನೀಡಿದೆ.

2023-24ರ ಹಣಕಾಸು ವರ್ಷದಲ್ಲಿಯೇ ರಸೀದಿಗಳು ಮತ್ತು ಪಾವತಿಗಳಿಗೆ ಸಂಬಂಧಿಸಿದ ಎಲ್ಲಾ ಸರ್ಕಾರಿ ವಹಿವಾಟುಗಳನ್ನು ಲೆಕ್ಕಹಾಕಲು ಮಾರ್ಚ್ 31, 2024 ರಂದು ಸರ್ಕಾರಿ ರಸೀದಿಗಳು ಮತ್ತು ಪಾವತಿಗಳೊಂದಿಗೆ ವ್ಯವಹರಿಸುವ ಬ್ಯಾಂಕುಗಳ ಎಲ್ಲಾ ಶಾಖೆಗಳನ್ನು ವಹಿವಾಟುಗಳಿಗೆ ಮುಕ್ತವಾಗಿಡಲು ಭಾರತ ಸರ್ಕಾರ ವಿನಂತಿಸಿದೆ.

ಹೀಗಾಗಿ ಈ ಹಣಕಾಸು ವರ್ಷದ ಕೊನೆಯ ದಿನವಾದ ಮಾರ್ಚ್ 31 ಭಾನುವಾರ ಬ್ಯಾಂಕುಗಳಿಗೆ ಸಾರ್ವತ್ರಿಕ ರಜಾ ದಿನವಾದರೂ ಅಂದು ತೆರೆದಿರಬೇಕಾಗುತ್ತದೆ.

ಏಜೆನ್ಸಿ ಸರ್ಕಾರಿ ಬ್ಯಾಂಕುಗಳು

  • ಬ್ಯಾಂಕ್ ಆಫ್ ಬರೋಡಾ
  • ಬ್ಯಾಂಕ್ ಆಫ್ ಇಂಡಿಯಾ
  • ಬ್ಯಾಂಕ್ ಆಫ್ ಮಹಾರಾಷ್ಟ್ರ
  • ಕೆನರಾ ಬ್ಯಾಂಕ್
  • ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
  • ಇಂಡಿಯನ್ ಬ್ಯಾಂಕ್
  • ಇಂಡಿಯನ್ ಓವರ್​ಸೀಸ್ ಬ್ಯಾಂಕ್
  • ಪಂಜಾಬ್ ಅಂಡ್ ಸಿಂದ್ ಬ್ಯಾಂಕ್
  • ಪಂಜಾಬ್ ನ್ಯಾಷನಲ್ ಬ್ಯಾಂಕ್
  • ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
  • ಯುಕೋ ಬ್ಯಾಂಕ್
  • ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

ಏಜೆನ್ಸಿ ಖಾಸಗಿ ಬ್ಯಾಂಕುಗಳು

  • ಎಕ್ಸಿಸ್ ಬ್ಯಾಂಕ್
  • ಸಿಟಿ ಯೂನಿಯನ್ ಬ್ಯಾಂಕ್
  • ಡಿಸಿಬಿ ಬ್ಯಾಂಕ್
  • ಫೆಡರಲ್ ಬ್ಯಾಂಕ್
  • ಎಚ್​ಡಿಎಫ್​ಸಿ ಬ್ಯಾಂಕ್
  • ಐಸಿಐಸಿಐ ಬ್ಯಾಂಕ್
  • ಐಡಿಬಿಐ ಬ್ಯಾಂಕ್
  • ಐಡಿಎಫ್​ಸಿ ಬ್ಯಾಂಕ್
  • ಇಂಡಸ್​ಇಂಡ್ ಬ್ಯಾಂಕ್
  • ಜಮ್ಮು ಅಂಡ್ ಕಾಶ್ಮೀರ್ ಬ್ಯಾಂಕ್
  • ಕರ್ಣಾಟಕ ಬ್ಯಾಂಕ್
  • ಕರೂರ್ ವೈಸ್ಯ ಬ್ಯಾಂಕ್
  • ಕೋಟಕ್ ಮಹೀಂದ್ರ ಬ್ಯಾಂಕ್
  • ಆರ್​ಬಿಎಲ್ ಬ್ಯಾಂಕ್
  • ಸೌತ್ ಇಂಡಿಯನ್ ಬ್ಯಾಂಕ್
  • ಯೆಸ್ ಬ್ಯಾಂಕ್
  • ಧನಲಕ್ಷ್ಮೀ ಬ್ಯಾಂಕ್
  • ಬಂಧನ್ ಬ್ಯಾಂಕ್
  • ಸಿಎಸ್​ಬಿ ಬ್ಯಾಂಕ್
  • ತಮಿಳುನಾಡ್ ಮರ್ಸಾಂಟೈಲ್ ಬ್ಯಾಂಕ್
  • ಡಿಬಿಎಸ್ ಬ್ಯಾಂಕ್

More from the blog

B. C. ROAD : ಜು.19ರಿಂದ 27ರವರೆಗೆ ಭಾರತ ದರ್ಶನ ಯಕ್ಷಗಾನ ತಾಳಮದ್ದಳೆ ನವಾಹ..

ಬಂಟ್ವಾಳ : ಬಿ.ಸಿ.ರೋಡಿನ ತುಳು ಶಿವಳ್ಳಿ ಸಭಾಭವನದಲ್ಲಿ ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು ಅವರಿಂದ ತುಳು ಶಿವಳ್ಳಿ ಸೇವಾ ಟ್ರಸ್ಟ್ ಬಂಟ್ವಾಳ ತಾಲೂಕು ಸಹಭಾಗಿತ್ವದಲ್ಲಿ ಭಾರತ ದರ್ಶನ ಎಂಬ ಯಕ್ಷಗಾನ ತಾಳಮದ್ದಳೆ...

ಬ್ರೋಕರ್ ಗಳ ಮಾತಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ: ಬೇಬಿ ಕುಂದರ್….

ಬಂಟ್ವಾಳ : ಬ್ರೋಕರ್ ಗಳ ಮಾತಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ಜನರ ಸಮಸ್ಯೆ ಪರಿಹಾರ ಮಾಡುತ್ತೇನೆ, ಭ್ರಷ್ಟಾಚಾರ ರಹಿತ ಕೆಲಸಕ್ಕೆ ಒತ್ತು ನೀಡುವುದಾಗಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ‌ಕುಂದರ್ ತಿಳಿಸಿದ್ದಾರೆ. ನಗರ ಯೋಜನಾ ಪ್ರಾಧಿಕಾರದ...

ಬೂಡ ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಆಗುತ್ತಿಲ್ಲ: ಕಾಂಗ್ರೆಸ್ ಮುಖಂಡ ಮಹಮ್ಮದ್ ನಂದಾವರ ಆಕ್ರೋಶ

ಬಂಟ್ವಾಳ: ಇಲ್ಲಿನ ನಗರ ಯೋಜನಾ ಪ್ರಾಧಿಕಾರದಲ್ಲಿ ಸಾರ್ವಜನಿಕರ ಯಾವುದೇ ಕೆಲಸ ಕಾರ್ಯಗಳು ಆಗುತ್ತಿಲ್ಲ ಎಂದು ಆರೋಪಗಳು ಕೇಳಿ ಬಂದಿದ್ದು, ಪ್ರಾಧಿಕಾರದ ವಿರುದ್ದ ಕಾಂಗ್ರೆಸ್ ಮುಖಂಡ ಮಹಮ್ಮದ್ ನಂದಾವರ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಗರ ಯೋಜನಾ ಪ್ರಾಧಿಕಾರದಲ್ಲಿ...

ಅಡಿಕೆ ವ್ಯಾಪಾರಿಯಿಂದ ವಂಚನೆ ಪ್ರಕರಣ  : ನ್ಯಾಯಕ್ಕಾಗಿ ಶಾಸಕ ರಾಜೇಶ್ ನಾಯ್ಕ್ ಗೆ ಮನವಿ

ಬಂಟ್ವಾಳ: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ‌ರೂಪಾಯಿ ವಂಚಿಸಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಅಶೋಕ್ ಶೆಟ್ಟಿ ಸರಪಾಡಿ ನೇತೃತ್ವದಲ್ಲಿ ರೈತರು ನ್ಯಾಯಕ್ಕಾಗಿ ಶಾಸಕ ರಾಜೇಶ್ ನಾಯ್ಕ್ ಅವರನ್ನು ಬೇಟಿಯಾಗಿ ಮನವಿ ನೀಡಿದ್ದಾರೆ. ಬಳಿಕ...