Thursday, February 13, 2025

ಮಾರ್ಚ್ 31, ಭಾನುವಾರ ಬ್ಯಾಂಕ್​​ಗಳಿಗೆ ರಜೆ ರದ್ದು

ನವದೆಹಲಿ: ಸರ್ಕಾರದ ವಹಿವಾಟುಗಳನ್ನು ನಿರ್ವಹಿಸುತ್ತಿರುವ ಎಲ್ಲಾ ಏಜೆನ್ಸಿ ಬ್ಯಾಂಕುಗಳೂ ಹಣಕಾಸು ವರ್ಷದ ಕೊನೆ ದಿನವಾದ ಮಾರ್ಚ್ 31, ಭಾನುವಾರದಂದು ತೆರೆದಿರಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶನ ನೀಡಿದೆ.

2023-24ರ ಹಣಕಾಸು ವರ್ಷದಲ್ಲಿಯೇ ರಸೀದಿಗಳು ಮತ್ತು ಪಾವತಿಗಳಿಗೆ ಸಂಬಂಧಿಸಿದ ಎಲ್ಲಾ ಸರ್ಕಾರಿ ವಹಿವಾಟುಗಳನ್ನು ಲೆಕ್ಕಹಾಕಲು ಮಾರ್ಚ್ 31, 2024 ರಂದು ಸರ್ಕಾರಿ ರಸೀದಿಗಳು ಮತ್ತು ಪಾವತಿಗಳೊಂದಿಗೆ ವ್ಯವಹರಿಸುವ ಬ್ಯಾಂಕುಗಳ ಎಲ್ಲಾ ಶಾಖೆಗಳನ್ನು ವಹಿವಾಟುಗಳಿಗೆ ಮುಕ್ತವಾಗಿಡಲು ಭಾರತ ಸರ್ಕಾರ ವಿನಂತಿಸಿದೆ.

ಹೀಗಾಗಿ ಈ ಹಣಕಾಸು ವರ್ಷದ ಕೊನೆಯ ದಿನವಾದ ಮಾರ್ಚ್ 31 ಭಾನುವಾರ ಬ್ಯಾಂಕುಗಳಿಗೆ ಸಾರ್ವತ್ರಿಕ ರಜಾ ದಿನವಾದರೂ ಅಂದು ತೆರೆದಿರಬೇಕಾಗುತ್ತದೆ.

ಏಜೆನ್ಸಿ ಸರ್ಕಾರಿ ಬ್ಯಾಂಕುಗಳು

  • ಬ್ಯಾಂಕ್ ಆಫ್ ಬರೋಡಾ
  • ಬ್ಯಾಂಕ್ ಆಫ್ ಇಂಡಿಯಾ
  • ಬ್ಯಾಂಕ್ ಆಫ್ ಮಹಾರಾಷ್ಟ್ರ
  • ಕೆನರಾ ಬ್ಯಾಂಕ್
  • ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
  • ಇಂಡಿಯನ್ ಬ್ಯಾಂಕ್
  • ಇಂಡಿಯನ್ ಓವರ್​ಸೀಸ್ ಬ್ಯಾಂಕ್
  • ಪಂಜಾಬ್ ಅಂಡ್ ಸಿಂದ್ ಬ್ಯಾಂಕ್
  • ಪಂಜಾಬ್ ನ್ಯಾಷನಲ್ ಬ್ಯಾಂಕ್
  • ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
  • ಯುಕೋ ಬ್ಯಾಂಕ್
  • ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

ಏಜೆನ್ಸಿ ಖಾಸಗಿ ಬ್ಯಾಂಕುಗಳು

  • ಎಕ್ಸಿಸ್ ಬ್ಯಾಂಕ್
  • ಸಿಟಿ ಯೂನಿಯನ್ ಬ್ಯಾಂಕ್
  • ಡಿಸಿಬಿ ಬ್ಯಾಂಕ್
  • ಫೆಡರಲ್ ಬ್ಯಾಂಕ್
  • ಎಚ್​ಡಿಎಫ್​ಸಿ ಬ್ಯಾಂಕ್
  • ಐಸಿಐಸಿಐ ಬ್ಯಾಂಕ್
  • ಐಡಿಬಿಐ ಬ್ಯಾಂಕ್
  • ಐಡಿಎಫ್​ಸಿ ಬ್ಯಾಂಕ್
  • ಇಂಡಸ್​ಇಂಡ್ ಬ್ಯಾಂಕ್
  • ಜಮ್ಮು ಅಂಡ್ ಕಾಶ್ಮೀರ್ ಬ್ಯಾಂಕ್
  • ಕರ್ಣಾಟಕ ಬ್ಯಾಂಕ್
  • ಕರೂರ್ ವೈಸ್ಯ ಬ್ಯಾಂಕ್
  • ಕೋಟಕ್ ಮಹೀಂದ್ರ ಬ್ಯಾಂಕ್
  • ಆರ್​ಬಿಎಲ್ ಬ್ಯಾಂಕ್
  • ಸೌತ್ ಇಂಡಿಯನ್ ಬ್ಯಾಂಕ್
  • ಯೆಸ್ ಬ್ಯಾಂಕ್
  • ಧನಲಕ್ಷ್ಮೀ ಬ್ಯಾಂಕ್
  • ಬಂಧನ್ ಬ್ಯಾಂಕ್
  • ಸಿಎಸ್​ಬಿ ಬ್ಯಾಂಕ್
  • ತಮಿಳುನಾಡ್ ಮರ್ಸಾಂಟೈಲ್ ಬ್ಯಾಂಕ್
  • ಡಿಬಿಎಸ್ ಬ್ಯಾಂಕ್

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...