Wednesday, July 9, 2025

ಮಸೀದಿ ಜಮೀನು ವಿವಾದ ಅಳತೆಯ ವೇಳೆ ಎಸ್.ಐ.ಗಳ ಮೇಲೆ ಹಲ್ಲೆಗೆ ಯತ್ನ: ಲಾಠಿ ಚಾರ್ಜ್ ಒರ್ವನ ವಶಕ್ಕೆ

ಬಂಟ್ವಾಳ: ಅಕ್ಕರಂಗಡಿ ಜುಮಾ ಮಸೀದಿ ಗೆ ಸಂಬಂಧಪಟ್ಟ ಜಮೀನನ್ನು ಅನೆಕ್ಷರ್ ಜಿ ಪ್ರಕಾರ ಸರ್ವೆ ಕಾರ್ಯ ಮಾಡುವ ವೇಳೆ ಎಸ್.ಐ.ಗಳಿಬ್ಬರ ಮೇಲೆ ಗುಂಪಿನಿಂದ ಹಲ್ಲೆ ಗೆ ಯತ್ನ ಒರ್ವನ ಬಂಧನ ಹಾಗೂ ಲಾಠಿ ಚಾರ್ಜ್ ಮಾಡಿದ ಘಟನೆ ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.


ಬಂಟ್ವಾಳ ‌ನಗರ ಠಾಣಾ ಪೋಲೀಸ್ ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ್ ಹಾಗೂ ಗ್ರಾಮಾಂತರ ಎಸ್.ಐ.ಪ್ರಸನ್ನ ಅವರ ಮೇಲೆ ಜಮೀನಿನ ಅಳತೆಯ ವೇಳೆ ಹಲ್ಲೆ ಗೆ ಮುಂದಾದಾಗ ಗುಂಪಿನ ಮೇಲೆ ಲಾಠಿ ಪ್ರಹಾರ ನಡೆಸಿ ದ್ದಾರೆ.
ಕೆಲ ಹೊತ್ತು ಇಲ್ಲಿ ಗೊಂದಲದ ಪರಿಸ್ಥಿತಿ ಕೂಡಾ ನಿರ್ಮಾಣ ವಾಗಿತ್ತು.
ಜಮೀನಿನ ಅಳತೆಯ ವೇಳೆ ಕಾನೂನು ಸುವ್ಯವಸ್ಥೆ ಗೆ ಭಂಗ ಬರುತ್ತದೆ ಸಾದ್ಯತೆ ಗಳಿವೆ ಎಂಬ ಕಾರಣ ಕ್ಕಾಗಿ ಹೆಚ್ಚುವರಿ ಪೋಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು.
ಅಳತೆಯ ವೇಳೆ ಬಂಟ್ವಾಳ ಎ.ಎಸ್.ಪಿ.ಸೈದುಲು ಅಡಾವತ್ , ಬಂಟ್ವಾಳ ವ್ರತ್ತ ನಿರೀಕ್ಷಕ ಶರಣ್ ಗೌಡ, ಹಾಗೂ ನಗರ ಠಾಣಾ ಎಸ್. ಐ.ಚಂದ್ರಶೇಖರ್, ಗ್ರಾಮಾಂತರ ಎಸ್.ಐ.‌ಪ್ರಸನ್ನ, ಟ್ರಾಫಿಕ್ ಎಸ್.ಐ.ಮಂಜುನಾಥ ಅವರು ಸ್ಥಳದಲ್ಲಿದ್ದು ಹೆಚ್ಚಿನ ಕ್ರಮ ಕೈಗೊಂಡಿದ್ದರು.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...