Sunday, February 9, 2025

ಜ. 6 ರಂದು ಬಡಹೆಣ್ಣುಮಕ್ಕಳ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ

ಬಂಟ್ವಾಳ: ಮುಬಾರಕ್ ಜುಮಾ ಮಸೀದಿ, ಬಾಂಬಿಲ ಇದರ ವತಿಯಿಂದ ದಾರುಸ್ಸಲಾಂ ಮದ್ರಸ ಮದ್ವಾ ಹಾಗೂ ಅನ್ಸಾರುಲ್ ಮುಸ್ಲಿಮೀನ್ ಇದರ ಜಂಟಿ ಆಶ್ರಯದಲ್ಲಿ ಬಡಹೆಣ್ಣುಮಕ್ಕಳ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ ಜ. 6 ರಂದು ಬೆಳಿಗ್ಗೆ 9ಕ್ಕೆ ಬಾಂಬಿಲ ಜಮಾಅತಿನ ಗೌರವಾಧ್ಯಕ್ಷ ಅಲ್‌ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಅವರ ನೇತೃತ್ವದಲ್ಲಿ ಬಾಂಬಿಲ ಮಸೀದಿಯ ವಠಾರದಲ್ಲಿ ಜರಗಲಿದೆ ಎಂದು ಮಸೀದಿ ಆಡಳಿತದ ಅಧ್ಯಕ್ಷ ಬಿ.ಎಂ.ಬಾವ ಮುಸ್ಲಿಯಾರ್ ಹೇಳಿದ್ದಾರೆ.ಬುಧವಾರ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಕೆಜೆಯು ಉಪಾಧ್ಯಕ್ಷ ಕೆ.ಪಿ.ಅಬ್ದುಲ್ ಜಬ್ಬಾರ್ ಉಸ್ತಾದ್ ಮಿತ್ತಬೈಲ್ ಅವರು ಅಧ್ಯಕ್ಷತೆ ವಹಿಸುವರು. ಡಿ.4 ಮತ್ತು 5 ರಂದು ರಾತ್ರಿ ಧಾರ್ಮಿಕ ಮತಪ್ರಭಾಷಣ ನಡೆಯಲಿದೆ ಎಂದು ಹೇಳಿದರು.ಈ ಬಾರಿ ಜಮಾಅತ್‌ನ ಮೂರು ಬಡ ಜೋಡಿಗಳನ್ನು ಗುರುತಿಸಿದ್ದೇವೆ. ವಧುವಿಗೆ ೫ ಪವನ್ ಚಿನ್ನ, 30 ಸಾವಿರ ರೂ. ಮೌಲ್ಯದ ಉಡುಪು ಹಾಗೂ ವರನಿಗೆ ವಾಚ್, ಉಡುಪುಗಳನ್ನು ಆಡಳಿತ ಸಮಿತಿಯಿಂದ ಉಡುಗೊರೆಯಾಗಿ ನೀಡಲಿದ್ದೇವೆ. ಕಾರ್ಯಕ್ರಮಕ್ಕೆ ಸುಮಾರು 3 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು. ಬಾಂಬಿಲ ಕೇಂದ್ರ ಜುಮಾ ಮಸೀದಿಯ ಖತೀಬ್ ಎನ್.ಅಬ್ದುಲ್ ಬಶೀರ್ ಯಮಾನಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಿತ್ತಬೈಲ್ ಮಸೀದಿಯ ಖತೀಬ್ ಅಶ್ರಫ್ ಮುಖ್ಯ ಪ್ರಭಾಷಣ ಮಾಡುವರು. ಡಿ. 5ರಂದು ಮಗರಿಬ್ ನಮಾಝಿನ ಬಳಿಕ ಪಯ್ಯಕ್ಕಿ ಉಸ್ತಾದ್ ಇಸ್ಲಾಮಿಕ್ ಅಕಾಡಮಿ “ಶಮೀಮೇ ಮದೀನಾ” ತಂಡದಿಂದ ಬುರ್ದಾ ಆಲಾಪನೆ ನಡೆಯಲಿದೆ. ಕಣ್ಣೂರು ಮಸೀರಿಯ ಮುದರ್ರಿಸ್ ಅನ್ಸಾರುದ್ದೀನ್ ಬುರ್ಹಾನಿ ಫೈಝಿ ಮುಖ್ಯ ಪ್ರಭಾಷಣ ಮಾಡುವರು ಎಂದು ಮಾಹಿತಿ ನೀಡಿದರು.ಡಿ. 6 ರಂದು ಬೆಳಿಗ್ಗೆ 9 ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಕೇರಳದ ಎನ್.ಪಿ.ಎಂ.ಸೈಯದ್ ಜಲಾಲುದ್ದೀನ್ ತಂಙಳ್ ಏಝ್‌ಮಲ ಅವರು ದುಆಃ ನೆರವೇರಿಸುವರು. ಚೊಕ್ಕಬೆಟ್ಟುವಿನ ಯು.ಕೆ.ಅಬ್ದುಲ್ ಅಝೀಝ್ ದಾರಿಮಿ ಮುಖ್ಯ ಪ್ರಭಾಷಣ ಮಾಡುವರು ಎಂದು ಮಾಹಿತಿ ನೀಡಿದರು.ಸುದ್ದಿಗೋಷ್ಠಿಯಲ್ಲಿ ಮಸೀದಿ ಆಡಳಿತ ಸಮಿತಿಯ ಪದಾಧಿಕಾರಿಗಳಾದ ಬಿ.ಮುಸ್ತಫಾ, ಯೂಸುಫ್, ಆಸಿಫ್ ಉಪಸ್ಥಿತರಿದ್ದರು.

More from the blog

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...