Tuesday, July 1, 2025

ಜ. 6 ರಂದು ಬಡಹೆಣ್ಣುಮಕ್ಕಳ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ

ಬಂಟ್ವಾಳ: ಮುಬಾರಕ್ ಜುಮಾ ಮಸೀದಿ, ಬಾಂಬಿಲ ಇದರ ವತಿಯಿಂದ ದಾರುಸ್ಸಲಾಂ ಮದ್ರಸ ಮದ್ವಾ ಹಾಗೂ ಅನ್ಸಾರುಲ್ ಮುಸ್ಲಿಮೀನ್ ಇದರ ಜಂಟಿ ಆಶ್ರಯದಲ್ಲಿ ಬಡಹೆಣ್ಣುಮಕ್ಕಳ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ ಜ. 6 ರಂದು ಬೆಳಿಗ್ಗೆ 9ಕ್ಕೆ ಬಾಂಬಿಲ ಜಮಾಅತಿನ ಗೌರವಾಧ್ಯಕ್ಷ ಅಲ್‌ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಅವರ ನೇತೃತ್ವದಲ್ಲಿ ಬಾಂಬಿಲ ಮಸೀದಿಯ ವಠಾರದಲ್ಲಿ ಜರಗಲಿದೆ ಎಂದು ಮಸೀದಿ ಆಡಳಿತದ ಅಧ್ಯಕ್ಷ ಬಿ.ಎಂ.ಬಾವ ಮುಸ್ಲಿಯಾರ್ ಹೇಳಿದ್ದಾರೆ.ಬುಧವಾರ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಕೆಜೆಯು ಉಪಾಧ್ಯಕ್ಷ ಕೆ.ಪಿ.ಅಬ್ದುಲ್ ಜಬ್ಬಾರ್ ಉಸ್ತಾದ್ ಮಿತ್ತಬೈಲ್ ಅವರು ಅಧ್ಯಕ್ಷತೆ ವಹಿಸುವರು. ಡಿ.4 ಮತ್ತು 5 ರಂದು ರಾತ್ರಿ ಧಾರ್ಮಿಕ ಮತಪ್ರಭಾಷಣ ನಡೆಯಲಿದೆ ಎಂದು ಹೇಳಿದರು.ಈ ಬಾರಿ ಜಮಾಅತ್‌ನ ಮೂರು ಬಡ ಜೋಡಿಗಳನ್ನು ಗುರುತಿಸಿದ್ದೇವೆ. ವಧುವಿಗೆ ೫ ಪವನ್ ಚಿನ್ನ, 30 ಸಾವಿರ ರೂ. ಮೌಲ್ಯದ ಉಡುಪು ಹಾಗೂ ವರನಿಗೆ ವಾಚ್, ಉಡುಪುಗಳನ್ನು ಆಡಳಿತ ಸಮಿತಿಯಿಂದ ಉಡುಗೊರೆಯಾಗಿ ನೀಡಲಿದ್ದೇವೆ. ಕಾರ್ಯಕ್ರಮಕ್ಕೆ ಸುಮಾರು 3 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು. ಬಾಂಬಿಲ ಕೇಂದ್ರ ಜುಮಾ ಮಸೀದಿಯ ಖತೀಬ್ ಎನ್.ಅಬ್ದುಲ್ ಬಶೀರ್ ಯಮಾನಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಿತ್ತಬೈಲ್ ಮಸೀದಿಯ ಖತೀಬ್ ಅಶ್ರಫ್ ಮುಖ್ಯ ಪ್ರಭಾಷಣ ಮಾಡುವರು. ಡಿ. 5ರಂದು ಮಗರಿಬ್ ನಮಾಝಿನ ಬಳಿಕ ಪಯ್ಯಕ್ಕಿ ಉಸ್ತಾದ್ ಇಸ್ಲಾಮಿಕ್ ಅಕಾಡಮಿ “ಶಮೀಮೇ ಮದೀನಾ” ತಂಡದಿಂದ ಬುರ್ದಾ ಆಲಾಪನೆ ನಡೆಯಲಿದೆ. ಕಣ್ಣೂರು ಮಸೀರಿಯ ಮುದರ್ರಿಸ್ ಅನ್ಸಾರುದ್ದೀನ್ ಬುರ್ಹಾನಿ ಫೈಝಿ ಮುಖ್ಯ ಪ್ರಭಾಷಣ ಮಾಡುವರು ಎಂದು ಮಾಹಿತಿ ನೀಡಿದರು.ಡಿ. 6 ರಂದು ಬೆಳಿಗ್ಗೆ 9 ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಕೇರಳದ ಎನ್.ಪಿ.ಎಂ.ಸೈಯದ್ ಜಲಾಲುದ್ದೀನ್ ತಂಙಳ್ ಏಝ್‌ಮಲ ಅವರು ದುಆಃ ನೆರವೇರಿಸುವರು. ಚೊಕ್ಕಬೆಟ್ಟುವಿನ ಯು.ಕೆ.ಅಬ್ದುಲ್ ಅಝೀಝ್ ದಾರಿಮಿ ಮುಖ್ಯ ಪ್ರಭಾಷಣ ಮಾಡುವರು ಎಂದು ಮಾಹಿತಿ ನೀಡಿದರು.ಸುದ್ದಿಗೋಷ್ಠಿಯಲ್ಲಿ ಮಸೀದಿ ಆಡಳಿತ ಸಮಿತಿಯ ಪದಾಧಿಕಾರಿಗಳಾದ ಬಿ.ಮುಸ್ತಫಾ, ಯೂಸುಫ್, ಆಸಿಫ್ ಉಪಸ್ಥಿತರಿದ್ದರು.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...