Monday, February 10, 2025

ಉಳಿ ಶಿಕ್ಷಕ ರಮಾ ಪಿ.ಸಾಲಿಯಾನ್ ಹೃದಯಾಘಾತದಿಂದ ನಿಧನ

ಬಂಟ್ವಾಳ: ಹೃದಯಾಘಾತದಿಂದ ಶಿಕ್ಷಕ ಸಾವನ್ನಪ್ಪಿದ ಘಟನೆ ಪುಂಜಾಲಕಟ್ಟೆಯಲ್ಲಿ ಇಂದು ನಡೆದಿದೆ.

ಮುಖ್ಯೋಪಾಧ್ಯಾಯ ರಾಮಾ ಪಿ. ಸಾಲಿಯಾನ್ (56) ಅವರು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು.
ಅವರು ಇತ್ತೀಚಿಗೆ ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದರು.
ಉಳಿ ಶಾಸಕರ ಮಾದರಿ ಹಿ.ಪ್ರಾ.ಶಾಲೆಯಲ್ಲಿ ಮುಖ್ಯೋಪಾಧ್ಯಾಯ ರಾಗಿ ಕೆಲಸ ಮಾಡುತ್ತಿದ್ದ ಇವರು ಇಂದು ಮುಂಜಾನೆ 5.30 ರ ವೇಳೆ ಮನೆಯಲ್ಲಿ ಹೃದಯಾಘಾತದಿಂದ ನಿಧನರಾದರು.
ಇವರು ಕಂಬಳ ಪ್ರಿಯರಾಗಿದ್ದರಲ್ಲದೆ ಕಂಬಳ ಕೋಣದ ಮಾಲಕ ಕೂಡ ಹೌದು.

ಕಂಬಳ ಕ್ರೀಡೆ ಯಲ್ಲಿ ಅನೇಕ ಪ್ರಶಸ್ತಿಯನ್ನು ಇವರ ಕೋಣಗಳು ಪಡೆದುಕೊಂಡಿತ್ತು.

ಪುಂಜಾಲಕಟ್ಟೆ ಸ್ವಸ್ತಿಕ್ ಪ್ರೆಂಡ್ಸ್ ಕ್ಲಬ್ ನೀಡುವ
ಸ್ವಸ್ತಿ ಶ್ರೀ ರಾಜ್ಯ ಪ್ರಶಸ್ತಿ ಸಹಿತ ಅನೇಕ ರಾಜ್ಯ ರಾಷ್ಟ್ರ ಮಟ್ಟದ ಪ್ರಶಸ್ತಿ ಗಳನ್ನು ಅವರು ಪಡೆದುಕೊಂಡಿದ್ದಾರೆ.
ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿರುವ ಇವರು ಸ್ಥಳೀಯ ವಾಗಿ ಎಲ್ಲರ ಅಚ್ಚುಮೆಚ್ಚಿನ ರಮಾ ಅಣ್ಣ ಎಂದು ಚಿರಪರಿಚಿತ ರಾಗಿದ್ದರು.

ತಾಂಬೂಲ ನಾಟಕ ಕಲಾ ತಂಡದ ಪ್ರಮುಖರು ಕೂಡಾ ಅಗಿದ್ದರು.
ಸಾಮಾಜಿಕ ಧಾರ್ಮಿಕ ಚಟುವಟಿಕೆಯಲ್ಲಿ ಇವರು ತೊಡಗಿಸಿಕೊಂಡಿದ್ದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು , ಜಿ.ಪಂ.ಸದಸ್ಯ ತುಂಗಪ್ಪ ಎಂ.ಬಂಗೇರ, ಸ್ವಸ್ತಿಕ್ ಪ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಸಹಿತ ಅನೇಕ ಗಣ್ಯರು ಇವರಿಗೆ ಸಂತಾಪ ಸೂಚಿಸಿದ್ದಾರೆ

More from the blog

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...