Thursday, February 13, 2025

ಬಾಯಿಲ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಮತದಾನ ಬಹಿಷ್ಕಾರ

ಬಂಟ್ವಾಳ: ಪರಿಶಿಷ್ಟ ಜಾತಿ ಕಾಲೋನಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸದ ಗ್ರಾ.ಪಂ.ನ ಕೋಪದಿಂದ ಈ ಬಾರಿಯ ಲೋಕಸಭಾ ಚುನಾವಣೆಗೆ ಮತದಾನ ಬಹಿಷ್ಕಾರ ಮಾಡುವ ಎಚ್ಚರಿಕೆಯ ಬ್ಯಾನರ್ ನ್ನು ತಾಲೂಕಿನ ಬಾಯಿಲದಲ್ಲಿ ಹಾಕಲಾಗಿದೆ.


ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮ‌ಪಂಚಾಯತ್ ವ್ಯಾಪ್ತಿಯ ಬಾಯಿಲ ಪರಿಶಿಷ್ಟ ಜಾತಿ ಕಾಲೋನಿಯ ಸುಮಾರು ಐದು ಮನೆಗಳಿಗೆ ಕಳೆದ ಮೂರು ವರ್ಷಗಳಿಂದ ಕುಡಿಯಲು ಶುದ್ಧ ನೀರಿಲ್ಲ, ರಾತ್ರಿ ಹೊತ್ತಿನಲ್ಲಿ ಹೊರಗೆ ಹೋಗಲು ದಾರಿದೀಪದ ವ್ಯವಸ್ಥೆ ಇಲ್ಲ, ರಸ್ತೆಯಂತೂ ಇಲ್ಲವೆ ಇಲ್ಲ, ಇದನ್ನು ಕೇಳುವವರು ಯಾರೂ ಇಲ್ಲ .
ಹಾಗಾಗಿ ಈ ಬಾರಿಯ ಮತದಾನ ಬಹಿಷ್ಕಾರದ ನಿರ್ಧಾರ ಮಾಡಿದ್ದೇವೆ ಎಂದು ಬಾಯಿಲ ನಿವಾಸಿ ಶರತ್ ಅವರು ಮಾಧ್ಯಮರಲ್ಲಿ ತಿಳಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಈ ಬಗ್ಗೆ ಗ್ರಾಮ ಸಭೆ, ಗ್ರಾಮ ಪಂಚಾಯತ್ , ಪಿಡಿಒ, ಗ್ರಾ.ಪಂ.ಅದ್ಯಕ್ಷ ಹಾಗೂ ಸದಸ್ಯರು ಗಳಲ್ಲಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾದಿಕಾರಿಯವರಲ್ಲಿ ಲಿಖಿತ ದೂರು ನೀಡುತ್ತಲೆ ಬಂದರೂ ಯಾವುದೇ ಪ್ರಯೋಜನ ವಾಗಿಲ್ಲ. ಕೊನೆಗೆ ಬೆಸೆತ್ತ ಇಲ್ಲಿನ ನಿವಾಸಿಗಳು ಈ ನಿರ್ಧಾರ ಕ್ಕೆ ಬಂದಿದ್ದೇವೆ ಎಂದು ಅವರು ಹೇಳುತ್ತಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...