Wednesday, February 12, 2025

ಪಕಳಬೆಟ್ಟುವಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಮತಯಾಚನೆ

ಬಂಟ್ವಾಳ: ನಾವೂರ ಗ್ರಾಮದ ಪಕಳಬೆಟ್ಟು ಪರಿಸರದಲ್ಲಿ ಶಾಸಕರಾದ ರಾಜೇಶ್ ನಾಯ್ಕ್ ಮತಯಾಚನೆ ಮಾಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಬಿ.ಜೆ.ಪಿ ನಳಿನ್ ಕುಮಾರ್ ಕಟೀಲು ಅವರಿಗೆ ಅಮೂಲ್ಯವಾದ ಮತವನ್ನು ನೀಡಿ ಮತ್ತೊಮ್ಮೆ ಮೋದಿಯನ್ನು ಪ್ರಧಾನಮಂತ್ರಿಯನ್ನು ಮಾಡುವಂತೆ ಮತದಾರರಲ್ಲಿ ಮನವಿ ಮಾಡಿದರು.

ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾದ ನಂತರ ಜಗತ್ತಿನಲ್ಲಿ ಭಾರತಕ್ಕೆ ವಿಶ್ವಗುರು ಸ್ಥಾನ ಸಿಕ್ಕಿದೆ. ನರೇಂದ್ರ ಮೋದಿಯವರ ಉಜ್ವಲ ಆಯುಷ್ಮಾನ್ ಇನ್ನಿತರ ಯೋಜನೆಗಳು ಜನಸಾಮಾನ್ಯರಿಗೆ ಸಹಕಾರಿಯಾಗಿದೆ. ನಳಿನ್ ಕುಮಾರ್ ಕಟೀಲ್ ಜಿಲ್ಲೆಯ ಸಮಸ್ಯೆಯ ಬಗ್ಗೆ ಪಾರ್ಲಿಮೆಂಟ್‌ನ ಬಗ್ಗೆ ಅಡಿಕೆ ಬೆಳೆಗಾರರ ಸಮಸ್ಯೆಯ ಬಗ್ಗೆ ಕೇಂದ್ರ ಸರ್ಕಾರದ ಗಮನಹರಿಸುವಲ್ಲಿ ಜಿಲ್ಲೆಗೆ ಅತಿಹೆಚ್ಚು ಅನುದಾನ ತಂದಿದ್ದಾರೆ. ಜಿಲ್ಲೆ ಅಭಿವೃದ್ದಿಗೆ ನಳಿನ್ ಕುಮಾರ್ ಮತವನ್ನು ನೀಡುವುದರ ಮೂಲಕ ದೇಶದ ರಕ್ಷಣೆಗೆ ನರೇಂದ್ರ ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಯಾಗಿಸೋಣ. ಬಂಟ್ವಾಳ ಕ್ಷೇತ್ರ ಗ್ರಾಮ ಗ್ರಾಮಗಳಲ್ಲಿ ಬಿ.ಜೆ.ಪಿ ಪರವಾದ ವಾತವರಣವಿದ್ದು ಬಿ.ಜೆ.ಪಿ ಅತಿ ಹೆಚ್ಚು ಮತಗಳು ಗಳಿಸಲಿದೆ. ಈ ಸಂದರ್ಭದಲ್ಲಿ ನಾವೂರ ಪ್ರಭಾರಿಯಾದ ಧನಂಜಯ ಶೆಟ್ಟಿ ,ಸರಪಾಡಿ ಪಂಚಾಯತ್ ಸದಸ್ಯರಾದ ಸದಾನಂದ ಗೌಡ, ಜನಾರ್ಧನ, ಜಯಂತಿ, ಪಂಚಾಯತ್ ಸಮಿತಿಯ ಅಧ್ಯಕ್ಷರಾದ ಶಾಂತವೀರ ಪೂಜಾರಿ, ಪ್ರಮುಖರಾದ ಸಂಜೀವ ಪೂಜಾರಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...