Tuesday, February 3, 2026

ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ: ಸೇವೆಗೆ ವಿರಾಮ ನೀಡದೆ ಸಾಂಕೇತಿಕ ಪ್ರತಿಭಟನೆ ನಡೆಸಿದ ಸಿಬ್ಬಂದಿಗಳು

ಬಂಟ್ವಾಳ: ರಾಜ್ಯ ಎನ್.ಎಚ್.ಎಂ‌.ವಿಭಾಗದಿಂದ ಎ.1 ರಂದು ಎನ್.ಎಂ.ಎಚ್.ಸಿಬ್ಬಂದಿ ಗಳು ಸೇವೆಗೆ ವಿರಾಮ ಪಡೆಯಲು ಸೂಚಿಸಿದ್ದರು ಕೂಡ ಜಿಲ್ಲೆಯ ಸಿಬ್ಬಂದಿ ಗಳು ಕೋವಿಡ್ 19 ಮುಂಜಾಗ್ರತಾ ಕ್ರಮವಾಗಿ ಸಾರ್ವಜಿನಿಕ ಹಿತದೃಷ್ಟಿಯಿಂದ ಸೇವೆ ಗೆ ವಿರಾಮಪಡೆಯದೆ ವೇತನ ಪಡೆಯದೆ ” ಉಚಿತ ಆರೋಗ್ಯ ಸೇವೆ “ನೀಡಿದ್ದಾರೆ.

ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿರುವ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಎಲ್ಲಾ ಸಿಬ್ಬಂದಿ ಗಳು ಒಂದು ದಿನ ಕಪ್ಪು ಪಟ್ಟಿ ಧರಿಸಿ ಆರೋಗ್ಯ ಇಲಾಖೆ ಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ
ರಾಜ್ಯ ಸಂಘದ ಸೂಚನೆಯಂತೆ
ವಿನೂತನ ಶೈಲಿಯ ಲ್ಲಿ ಒಂದು ದಿನ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಸೇವೆ ನೀಡುತ್ತಿದ್ದಾರೆ.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಜಂಟಿ ಯೋಜನೆಯಾಗಿ 2005 ರಲ್ಲಿ ಅನುಷ್ಠಾನಗೊಂಡ ರಾಷ್ಟೀಯ ಅರೋಗ್ಯ ಅಭಿಯಾನದಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಸರಕಾರಿ ಲೇಡಿಗೋಷನ್ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಅರೋಗ್ಯ ಕೇಂದ್ರ, ಪ್ರಾಥಮಿಕ ಅರೋಗ್ಯ ಕೇಂದ್ರ ಹಾಗೂ ಇತರ ಅರೋಗ್ಯ ಕೇಂದ್ರಗಳಲ್ಲಿ 580 ರಷ್ಟು ವಿವಿಧ ವೃಂದ ದ ವೈದ್ಯರು ಮತ್ತು ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.

ಗುತ್ತಿಗೆ ನೌಕರರ ಪ್ರಮುಖ ಬೇಡಿಕೆಗಳಾದ ಸಮಾನ ಕೆಲಸಕ್ಕೆ ಸಮಾನ ವೇತನ, ಹರ್ಯಾಣ ರಾಜ್ಯ ಮಾದರಿಯಲ್ಲಿ ಕಂಪ್ರೆಹೆನ್ಸಿವ್ ಹೆಚ್ ಆರ್ ಪಾಲಿಸಿ ರಚನೆ, ಹೊರಗುತ್ತಿಗೆ ಪದ್ದತಿ ರದ್ದುಗೊಳಿಸುವುದು, ಇ.ಎಸ್.ಐ l. ಸೌಲಭ್ಯ ವಿಲ್ಲದೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಹಂತ ಹಂತವಾಗಿ ಗುತ್ತಿಗೆ ವೈದ್ಯರು ಮತ್ತು ಸಿಬ್ಬಂದಿಗಳನ್ನು ಇಲಾಖೆಯ ಖಾಯಂ ಹುದ್ದೆಗಳಿಗೆ ಸೇರಿಸಿ ಬೇಕು ಎಂದು ಒತ್ತಾಯ ವಾಗಿತ್ತು.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...