Tuesday, January 27, 2026

ಟಾಸ್ಕ್ ಫೋರ್ಸ್ ಸಮಿತಿಯನ್ನು ಕ್ರಿಯಾಶೀಲಗೊಳಿಸಿ, ಗ್ರಾಮಮಟ್ಟದಲ್ಲಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಮಂಗಳವಾರ ಅಗತ್ಯ ವಸ್ತುಗಳ ಖರೀದಿಸಲು ಜಿಲ್ಲಾಡಳಿತ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಮತ್ತು ಅಧಿಕಾರಿಗಳಿಗೆ ತೊಂದರೆಯಾಗದೆ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲು ಸಾಧ್ಯ ಎಂಬ ಕುರಿತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ ಅವರ ಉಪಸ್ಥಿತಿಯಲ್ಲಿ ಬಂಟ್ವಾಳ ಶಾಸಕರ ಕಚೇರಿಯಲ್ಲಿ ತಾಲೂಕು ಮಟ್ಟದ ಪ್ರಮುಖ ಅಧಿಕಾರಿಗಳ ಸಭೆ ನಡೆಸಲಾಯಿತು.
ಮಂಗಳವಾರಕ್ಕೆ ಬೇಕಾದ ದಿನಸಿ ಸಾಮಾಗ್ರಿಗಳನ್ನು ದಾಸ್ತಾನು ಮಾಡಲು ಅಂಗಡಿ ಲೈಸೆನ್ಸ್ ಇರುವ ಅಂಗಡಿ ಮಾಲಕರಿಗೆ ವಾಹನದ ಪಾಸ್ ನೀಡುವ ವ್ಯವಸ್ಥೆಯನ್ನು ಅಧಿಕಾರಿಗಳು ನೀಡಬೇಕು.
ನಾಳೆ ಅಂಗಡಿಗಳ ಮುಂಭಾಗದಲ್ಲಿ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಎಲ್ಲಾ ವ್ಯವಸ್ಥೆ ಅಗಬೇಕು, ಜೊತೆಗೆ ಇದರ ಸಂಪೂರ್ಣ ಜವಬ್ದಾರಿ ಯನ್ನು ಸರಕಾರದ ಸೂಚನೆಯಂತೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ರಚನೆಯಾದ ಟಾಸ್ಕಪೋರ್ಸ್ ಸಮಿತಿ ಜವಬ್ದಾರಿ ವಹಸಿಬೇಕು ಎಲ್ಲವನ್ನು ಪೋಲೀಸರ ಹೆಗಲಿಗೆ ಹಾಕುವುದು ಸರಿಯಲ್ಲ ಎಂದು ಶಾಸಕರು ಅಧಿಕಾರಿಗಳಿಗೆ ತಿಳಿಸಿದರು.
ಒಟ್ಟಿನಲ್ಲಿ ತಾಲೂಕಿನಲ್ಲಿ ಎಲ್ಲಿಯೂ ಅಗತ್ಯ ವಸ್ತಗಳ ಖರೀದಿ ಸಂದರ್ಭದಲ್ಲಿ ಎಡವಟ್ಟುಗಳು ಆಗಬಾರದು ಅನಿಟ್ಟಿನಲ್ಲಿ ಅಧಿಕಾರಿಗಳು ಇಂದು ಸಕಲ ವ್ಯವಸ್ಥೆ ಗಳನ್ನು ಜವಬ್ದಾರಿ ಯಿಂದ ಮಾಡಿಕೊಳ್ಳಲು ಸೂಚಿಸಿದರು.
ಅಗತ್ಯವಸ್ತುಗಳ ಖರೀದಿ ಅಲ್ಲದೆ ಸುಮ್ಮನೆ ತಿರುಗಾಟ ಮಾಡಿದರೆ ಅಂತವರ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳಲು ಪೋಲೀಸ್ ಇಲಾಖೆ ಅವರು ಸೂಚನೆ ನೀಡಿದರು.

ಬುಡಾ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ತಹಸೀಲ್ದಾರ್ ರಶ್ಮಿ ಎಸ್.ಆರ್, ತಾಪಂ ಇಒ ರಾಜಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಪೊಲೀಸ್ ಡಿವೈಎಸ್ಪಿ ವೆಲಂಟೈನ್ ಡಿಸೋಜ, ಸರ್ಕಲ್ ಇನ್ಸ್ ಪೆಕ್ಟರ್ ಸಿ.ಡಿ. ನಾಗರಾಜ್, ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಆಹಾರ ಇಲಾಖೆ ಅಧಿಕಾರಿ ಶ್ರೀನಿವಾಸ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿ ಸಿದ್ಧತೆ ಹಾಗೂ ಕೈಗೊಂಡ ಕ್ರಮಗಳ ಕುರಿತು ಪೂರಕ ಮಾಹಿತಿ ನೀಡಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...