Thursday, February 13, 2025

ಜಂಟಿ ಆಫ್ ಸೈಟ್ ಅಣಕು ಪ್ರಾತ್ಯಕ್ಷಿಕೆ

ಕುಕ್ಕಳ: ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದಲ್ಲಿ ಪೆಟ್ರೋನೆಟ್ MHB ಲಿಮಿಟೆಡ್ ಮತ್ತು HPCL LPG ಪೈಪ್ ಲೈನ್ ಮೂಲಕ ಜಂಟಿ ಆಫ್ ಸೈಟ್ ಮಾಕ್ ಡ್ರಿಲ್ ಅನ್ನು ನಡೆಸಲಾಯಿತು.

ಪೈಪ್ ಲೈನ್ ನಲ್ಲಿ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆ ನೀಡಿ ಸಾರ್ವಜನಿಕರಿಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು.

ಪೆಟ್ರೋನೆಟ್ ಮತ್ತು HPCL ಪೈಪ್ ಲೈನ್ ನ ಅಧಿಕಾರಿಗಳು ಮತ್ತು ಸಿಬ್ಬಂದಿ, MRPL, HPCL, IOCL ಮತ್ತು BPCL ನ ಮ್ಯೂಚುವಲ್ ಏಡ್ ಇಂಡಸ್ಟ್ರೀಸ್ ಅಧಿಕಾರಿಗಳು ಅಣಕು ಡ್ರಿಲ್ ನಲ್ಲಿ ಭಾಗವಹಿಸಿದರು.

ಕಾರ್ಖಾನೆಗಳ ಉಪನಿರ್ದೇಶಕರು ಎಂ.ಎಸ್. ಮಹದೇವ್, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿ ವಿಜಯಕುಮಾರ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ, ಭರತ್ ಕುಮಾರ್, ನಾರಾಯಣ, ಎಎಸ್ ಐ ಪೊಲೀಸ್ ಠಾಣೆ ಪುಂಜಾಲಕಟ್ಟೆ, ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ, ಬೆಳ್ತಂಗಡಿ ಮಡಂತ್ಯಾರು ಗ್ರಾಮ ಪಂಚಾಯತ್‌ ಸದಸ್ಯರು, ಗ್ರಾಮಸ್ಥರು ಅಣಕು ಡ್ರಿಲ್ ನಲ್ಲಿ ಉಪಸ್ಥಿತರಿದ್ದರು.

 

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...