Thursday, July 10, 2025

ಬಂಟ್ವಾಳ ಕಂದಾಯ ಇಲಾಖೆಯಲ್ಲಿ ಬೀಳ್ಕೊಡುಗೆ ಸಮಾರಂಭ

ಬಂಟ್ವಾಳ: ಕಂದಾಯ ಇಲಾಖೆಯಲ್ಲಿ ಹಲವು ಕಾಲ ಸೇವೆ ಸಲ್ಲಿಸಿದ ಆಹಾರ ಶಾಖೆಯ ಶಿರಸ್ತೇದಾರ್ ಶ್ರೀನಿವಾಸ್ ಹಾಗೂ ಬೆರಳಚ್ಚುಗಾರರಾದ ಸತ್ಯಶಂಕರಿಅವರಿಗೆ ಬೀಳ್ಕೊಡುಗೆ ಸಮಾರಂಭ ಬಂಟ್ವಾಳ ಮಿನಿ ವಿಧಾನಸೌಧದ
ಸಭಾಂಗಣದಲ್ಲಿ ಕುಮಾರಿ ನವ್ಯ ಎಸ್.ಎನ್ ರಾವ್ ಅವರ ಪ್ರಾರ್ಥನೆ ಯೊಂದಿಗೆ ಜರಗಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಮಾತಾಡಿದ ತಹಶೀಲ್ದಾರ್ ರಶ್ಮಿ ಎಸ್. ಆರ್. ಅವರು ಯಾವುದೇ ದೂರುಗಳು ಬಾರದಂತೆ ಸಮರ್ಥವಾಗಿ ಕರ್ತವ್ಯ ನಿರ್ವಹಿಸಿದ ಆಹಾರ ಶಿರಸ್ತೇದಾರರಾದ ಶ್ರೀ ನಿವಾಸ್ ಮತ್ತು ಬೆರಳಚ್ಚುಗಾರರಾದ ಸತ್ಯಶಂಕರಿಯವರನ್ನು ಬೀಳ್ಕೊಡುತ್ತಿರುವುದು ಬಂಟ್ವಾಳ ತಾಲೂಕು ಕಛೇರಿಗೆ ತುಂಬಲಾರದ ನಷ್ಟ.ಅವರು ತಮ್ಮ ಸೌಮ್ಯ ಸ್ವಭಾವದಿಂದ ಎಲ್ಲಾ ಕೆಲಸಗಳನ್ನೂ ಸಮರ್ಪಕವಾಗಿ ನಿರ್ವಹಿಸುರುತ್ತಾರೆ.
ಇವರಿಬ್ಬರ ನಿವೃತ್ತಿ ಜೀವನ ಸುಗಮಯವಾಗಿರಲಿ ಎಂದು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ವಿಟ್ಲ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ ಅವರು ಮಾತಾನಾಡುತ್ತ ಶಿರಸ್ತೇದಾರ್ ಶ್ರೀನಿವಾಸ್ ಹಾಗೂ ಬೆರಳಚ್ಚು ಗಾರರಾದ ಸತ್ಯಶಂಕರಿಯವರ ಸರಳ ಸಜ್ಜನಿಕೆಯ ಕರ್ತವ್ಯ ನಿಷ್ಠೆಯನ್ನು ಕೊಂಡಾಡಿದರು.
ವೇದಿಕೆಯಲ್ಲಿ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ಅಣ್ಣು ನಾಯ್ಕ್,
ಶ್ರೀ ನಿವಾಸರವರ ಧರ್ಮ ಪತ್ನಿ ವಿಜಯ‌ಲಕ್ಷ್ಮೀ, ಸತ್ಯ ಶಂಕರಿಯವರ
ಪತಿ ಮೋನಪ್ಪ ಗೌಡ ಉಪಸ್ಥಿತರಿದ್ದರು.ಗ್ರಾಮ ಲೆಕ್ಕಾಧಿಕಾರಿ ಜನಾರ್ದನ. ಜೆ ಸ್ವಾಗತಿಸಿ
ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ವಂದಿಸಿದರು.
ಈ‌ ಸಂದರ್ಭದಲ್ಲಿ ತಾಲೂಕು ಕಚೇರಿ ಸಿಬ್ಬಂದಿಗಳು.ಗ್ರಾಮ ಲೆಕ್ಕಾಧಿಕಾರಿಗಳು.
ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

More from the blog

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...

ಗುರುಪೂರ್ಣಿಮಾ ಪ್ರಯುಕ್ತ ಪ್ರಸೂತಿ ತಜ್ಞೆ ವೆಂಕಮ್ಮರಿಗೆ ಬಿಜೆಪಿ ವತಿಯಿಂದ ಗೌರವರ್ಪಣೆ..

ಬಂಟ್ವಾಳ : ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ....

ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ ವಿವಾಹ..

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲೈ 13 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ...