Friday, June 27, 2025

ಶೌಚಾಲಯದ ಗುಂಡಿಗೆ ಬಿದ್ದು ವ್ಯಕ್ತಿ ಮೃತ

ಮಿತ್ತೂರು: ನೆಟ್ಲ ಮಡ್ನೂರು ಗ್ರಾಮದ ಪರ್ಲೊಟ್ಟುನಲ್ಲಿ ಶೌಚಾಲಯದ ಗುಂಡಿಗೆ ಬಿದ್ದು ಒರ್ವ ವ್ಯಕ್ತಿ ಮೃತ ಪಟ್ಟ ಘಟನೆ ಇಂದು ಬೆಳಿಗೆ ನಡೆದಿದೆ. ಹಳೆಯ ಶೌಚಾಲಯದ ಮೇಲೆ ಜೆಸಿಬಿ ಚಾಲಕ ತಿಳಿಯದೆ ನಡೆದುಕೊಂದು ಹೋದಾಗ ಅದರ ಒಳಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಇಡ್ಕಿದು ಗ್ರಾಮದ ಬೊಳ್ಳೆರೆಮಜಲು ನಿವಾಸಿ ರಾಮ ಸಪಲ್ಯರವರ ಪುತ್ರ ರಾಜೇಶ್(38) ಮೃತ ದಿರ್ದೈವಿ. ಸ್ಥಳೀಯ ಗುತ್ತಿಗೆದಾರರೋರ್ವರ ಜೆಸಿಬಿಯಲ್ಲಿ ಕೆಲದಿನಗಳಿಂದ ಆಪರೇಟರ್‍ ಆಗಿ ಕೆಲಸ ಮಾಡುತ್ತಿದ್ದರು. ನೆಟ್ಲ ಮಡ್ನೂರು ಗ್ರಾಮದ ಪರ್ಲೋಟ್ಟು ಎಂಬಲ್ಲಿ ಕಟ್ಟಡದ ಕಾಮಗಾರಿಗಳಿಂದ ನಡೆಸುವ ಸಲುವಾಗಿ ನೆಲವನ್ನು ಸಮತಟ್ಟು ಮಾಡುವ ಕಾರ್ಯ ನಿನ್ನೆಯಿಂದ ನಡೆಯುತ್ತಿತ್ತು. ಸಾಯಂಕಾಲ ಜೆಸಿಬಿ ಯನ್ನು ಕೆಲಸದ ಸ್ಥಳದಲ್ಲಿಯೇ ನಿಲ್ಲಿಸಿ ರಾಜೇಶ್ ಮನೆಗೆ ಬಂದಿದ್ದರು. ಜು.೧೧ರಂದು ಬೆಳಿಗ್ಗೆ ಕೆಲಸ ಮುಂದುವರೆಸುವ ಸಲುವಾಗಿ ರಾಜೇಶ್ ರವರು ಮನೆಯಿಂದ ತೆರಳಿ ಕೆಲಸ ಮಾಡಲಿದ್ದ ಸ್ಥಳದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಲ್ಲೇ ಇದ್ದ ಹಳೇ ಶೌಚಾಲಯದ ಹೊಂಡಕ್ಕೆ ಬಿದ್ದು ಮೃತಪಟ್ಟರು ಎಂದು ತಿಳಿದು ಬಂದಿದೆ. ಮೃತರು ತಂದೆ-ತಾಯಿ, ಪತ್ನಿ ಹಾಗೂ ಮಕ್ಕಳನ್ನು ಅಗಳಿದ್ದಾರೆ.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...