Wednesday, June 25, 2025

ಮರ್‍ ಹೂಮ್ ಶೈಖುನಾ ಮಿತ್ತಬೈಲ್ ಉಸ್ತಾದ್ ಅನುಸ್ಮರಣೆ ಹಾಗೂ ತಹ್ಲೀಲ್ ಸಮರ್ಪಣೆ

ಬಂಟ್ವಾಳ: ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಶಾಖಾ ವತಿಯಿಂದ ಇಲ್ಲಿನ ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್ ಆಶ್ರಯದಲ್ಲಿ ಮರ್‍ಹೂಂ ಶೈಖುನಾ ಮಿತ್ತಬೈಲ್ ಉಸ್ತಾದ್ (ನ.ಮ) ಅನುಸ್ಮರಣೆ ಹಾಗೂ ತಹ್ಲೀಲ್ ಸಮರ್ಪಣಾ ಕಾರ್ಯಕ್ರಮ ಭಾನುವಾರ ರಾತ್ರಿ ಆಲಡ್ಕದಲ್ಲಿ ನಡೆಯಿತು.

ಎಸ್ಕೆಎಸ್ಸೆಸ್ಸೆಫ್ ಪಾಣೆಮಂಗಳೂರು ಕ್ಲಸ್ಟರ್ ಅಧ್ಯಕ್ಷ ಅಬೂಸ್ವಾಲಿಹ್ ಫೈಝಿ ಕಾರ್ಯಕ್ರಮ ಉಧ್ಛಾಟಿಸಿದರು. ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ ವಲಯಾಧ್ಯಕ್ಷ ಇರ್ಷಾದ್ ದಾರಿಮಿ ಅಲ್-ಜಝರಿ ಪ್ರಾರ್ಥನೆ ನೆರವೇರಿಸಿದರು. ಶಾಖಾಧ್ಯಕ್ಷ ಅಬೂಬಕ್ಕರ್ ಎನ್.ಬಿ. ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು-ಬಂದರು ಕೇಂದ್ರ ಜುಮಾ ಮಸೀದಿ ಖತೀಬ್ ಸ್ವದಖತುಲ್ಲಾ ಫೈಝಿ ಪ್ರಸ್ತಾವನೆಗೈದರು. ಉಸ್ತಾದ್ ಇಲ್ಯಾಸ್ ಅರ್ಷದಿ ಸಜಿಪ  ಅನುಸ್ಮರಣಾ ಭಾಷಣಗೈದರು.
ಕಾರ್ಯಕ್ರಮದಲ್ಲಿ ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಶಾಖಾ ಗೌರವಾಧ್ಯಕ್ಚ ಹಾಜಿ ಎಸ್. ಅಬ್ದುಲ್ ಖಾದರ್ ಬೋಗೋಡಿ, ಕೋಶಾಧಿಕಾರಿ ಪಿ.ಬಿ. ಅಹ್ಮದ್ ಹಾಜಿ, ಹನೀಫ್ ಯಮಾನಿ, ಉಪಾಧ್ಯಕ್ಷ ಅಬ್ದುಲ್ ಮಜೀದ್ ಬೋಳಂಗಡಿ, ಸದಸ್ಯರಾದ ಹನೀಫ್ ಹಾಸ್ಕೊ, ಬಶೀರ್ ಕೆ4, ಅಬ್ದುಲ್ ಅಝೀಝ್ ಪಿ.ಐ, ಮುಹಮ್ಮದ್ ಶಫೀಕ್, ಅಬ್ದುಲ್ ಮುತ್ತಲಿಬ್, ಅಶ್ರಫ್ ಕೆಇಬಿ, ರಫೀಕ್ ಇನೋಳಿ, ಅಬ್ದುಲ್ ಸಲಾಂ ಸೆಂಟ್ರಿಂಗ್, ಅಬ್ದುಲ್ ಖಾದರ್ ಪೈಂಟರ್, ಜಬ್ಬಾರ್ ಬುರ್ಖಾ, ಸಿ.ಪಿ. ಶಾಕಿರ್, ಮುಹಮ್ಮದ್ ಬಂಗ್ಲೆಗುಡ್ಡೆ, ಸುಲೈಮಾನ್ ಬೋಳಂಗಡಿ ಮೊದಲಾದವರು ಭಾಗವಹಿಸಿದ್ದರು. ಶಾಖಾ ಸದಸ್ಯ ಅಬ್ದುಲ್ ಖಾದರ್ ಮದನಿ ಸ್ವಾಗತಿಸಿ, ಬಶೀರ್ ನಂದಾವರ ವಂದಿಸಿದರು.

More from the blog

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...

ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಣೆ

ಬಂಟ್ವಾಳ : ಕವಿ‌, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ಬಿ ತಮ್ಮಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಆಯೋಜಿಸಲಾತ್ತು. ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹೊಸಪೇಟೆ , ವಿಜಯನಗರ, ಬೆಂಗಳೂರು, ಚಿತ್ರದುರ್ಗ,...