Friday, January 30, 2026

ಬಂಟ್ವಾಳ ನಗರ ಠಾಣೆಯನ್ನು ಮೇಲ್ದರ್ಜೆಗೆ , ಸಿ.ಎಂ.ಗೆ ಶಾಸಕ ರಾಜೇಶ್ ನಾಯ್ಕ್ ಮನವಿ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರು ಈ ದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರನ್ನು ಬೇಟಿ ಮಾಡಿ ಚರ್ಚಿಸಿದರು.

ಬಂಟ್ವಾಳದ ವಿವಿಧ ಸಹಕಾರಿ ಸಂಘ ಗಳು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ ಚೆಕ್ಕುಗಳನ್ನು ಹಸ್ತಾಂತರಿಸಿದರು.
ಬಂಟ್ವಾಳ ನಗರ ಠಾಣೆಯನ್ನು ವೃತ್ತ ನಿರೀಕ್ಷಕರ ದರ್ಜೆಗೆ ಮೇಲ್ದರ್ಜೆಗೇರಿಸುವಂತೆ ಮನವಿ ಮಾಡಿ ಚರ್ಚಿಸಿದರು.
ಆರೋಗ್ಯ ಸಚಿವ ಶ್ರೀ ರಾಮುಲು ರವರನ್ನು ಬೇಟಿ ಮಾಡಿ ಪುಂಜಾಲಕಟ್ಟೆ ಪ್ರಾಥಮಿಕ ಹಾಗೂ ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡುವ ಬಗ್ಗೆ ಮಾತುಕತೆ ನಡೆಸಿದರು. ಸಚಿವರು ವಿಧಾನಸಭಾ ಅಧಿವೇಶನದ ಬಳಿಕ ಬಂಟ್ವಾಳಕ್ಕೆ ಬೇಟಿ ನೀಡುವುದಾಗಿ ತಿಳಿಸಿದರು.
ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ರವರಲ್ಲಿ ಬಂಟ್ವಾಳದ ಎಸ್.ವಿ.ಎಸ್ ಕಾಲೇಜಿನ ಸಮಸ್ಯೆಗಳ ಬಗ್ಗೆ ಆಡಳಿತ ಮಂಡಳಿ ಸದಸ್ಯರು ಹಾಗೂ ವಿಧ್ಯಾರ್ಥಿಗಳು ನೀಡಿರುವ ಲಿಖಿತ ದೂರಿನ ಬಗ್ಗೆ ತಿಳಿಸಿ ಸಚಿವರ ಗಮನ ಸೆಳೆದರು. ಈ ಬಗ್ಗೆ ಸಂಬಂಧಿಸಿದ ಉಪ ಕುಲಪತಿಯವರಿಗೆ ತಕ್ಷಣ ಗಮನಹರಿಸುವಂತೆ ಸಚಿವರು ಸೂಚಿಸಿದರು.

More from the blog

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...

9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿಗೆ ಪ್ರಭಾಕರ ಪ್ರಭು ಮನವಿ 

ಬಂಟ್ವಾಳ : ನೆನೆಗುದಿಗೆ ಬಿದ್ದಿರುವ 9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿ ಮಾಡಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...

ವಿಟ್ಲ ಜಾತ್ರೆ ಅಂಗಡಿ ಏಲಂನಲ್ಲಿ ಭಾರೀ ಅವ್ಯವಹಾರದ ದೂರು..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಅಂಗಡಿ ಏಲಂನ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಕೆ. ಎಂಬವರು ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದಾರೆ. ಜಾತ್ರೆಗೆ ಸಂತೆ...

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...