Friday, January 30, 2026

ಬೇಡಿಕೆಗಳಿಗೆ ಮತ್ತು ಸಮಸ್ಯೆ ಗಳ ಪರಿಹಾರಕ್ಕಾಗಿ ಗ್ರಾಮ ಸ್ಪಂದನ ಕಾರ್ಯಕ್ರಮ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ನಾನು ನಿಮ್ಮ ಧ್ವನಿ ಯಾಗಿದ್ದೇನೆ , ಕಷ್ಟಗಳಿಗೆ ಸ್ಷಂದನೆ ನೀಡುತೇನೆ, ನಿಮ್ಮ ಸಲಹೆ ಮತ್ತು ಬೇಡಿಕೆಗಳಿಗೆ ಸದಾ ಜೊತೆಗಿರುತ್ತೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಅವರು ಜೂ. 28 ರಂದು ಅಮ್ಟಾಡಿ ಗ್ರಾ.ಪಂ.ನಲ್ಲಿ ” ಗ್ರಾಮದ ಕಡೆ ಶಾಸಕರ ನಡೆ” ಗ್ರಾಮ ಸ್ಪಂದನ ಕಾರ್ಯಕ್ರಮ ದಲ್ಲಿ ಮಾತನಾಡಿದ ದರು.

1ಕೋಟಿ 20 ಲಕ್ಷ ಅನುದಾನ ಈ ಗ್ರಾ.ಪಂ.ಗೆ ಬಂದಿದ್ದು ಕಾಮಗಾರಿಗಳು ನಡೆಯುತ್ತಿವೆ.
ಉಳಿದಂತೆ ಗ್ರಾಮದ ಜನರಲ್ಲಿ ಇರುವ ಬೇಡಿಕೆಗಳಿಗೆ ಮತ್ತು ಸಮಸ್ಯೆ ಗಳ ಪರಿಹಾರಕ್ಕಾಗಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ.
ಸರಕಾರದ ಯೋಜನೆ ಪ್ರತಿಯೋಬ್ಬರಿಗೂ ತಲುಪಬೇಕು ಮತ್ತು ಜನರಿಗೆ ಯೋಜನೆಗಳ ಮಾಹಿತಿ ಸಿಗಬೇಕು ಎಂದು ಒತ್ತುನೀಡಿ ಅಧಿಕಾರಿಗಳ ಜೊತೆ ನಿಮ್ಮ ಬಳಿ ಬಂದಿದ್ದೇನೆ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಪಂ.ಅನುದಾನದಲ್ಲಿ ಕುರಿಯಾಳ ಕುಟಿಲ ನಿವಾಸಿ ವಿಕಲಾಂಗೆ ಭವಾನಿ ಅವರಿಗೆ ವೀಲ್ ಚೇರ್ ನ್ನು ಶಾಸಕರು ನೀಡಿದರು.

ಕಾರ್ಯಕ್ರಮಕ್ಕೆ ಅಗಮಿಸಿದ ಸಾರ್ವಜನಿಕ ರಿಂದ ಅಹವಾಲು ಸ್ವೀಕರಿಸಿದ ಅವರು ಕೆಲವೊಂದು ಸಮಸ್ಯೆ ಗಳಿಗೆ ಸ್ಥಳದಲ್ಲಿ ಪರಿಹಾರ ನೀಡಿದರು.

ಅಮ್ಟಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಶಾಸಕರ ಅನುದಾನದಲ್ಲಿ ನಡೆದ ಕಾಮಗಾರಿಗಳ ವೀಕ್ಷಣೆ ನಡೆಸಿದ ಬಳಿಕ ರಸ್ತೆಗಳ ಉದ್ಘಾಟನೆ ನಡೆಸಲಾಯಿತು.ಕಾರ್ಯಕ್ರಮ ದ ಬಳಿಕ ಅಧಿಕಾಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.ಸಮಸ್ಯೆ ಗಳಿಗೆ ಶೀಘ್ರವಾಗಿ ಮುಕ್ತಿ ನೀಡುವಂತೆ ತಿಳಿಸಿದರು. ‌
ಸ್ವಚ್ಚಗೆ ಆದ್ಯತೆ ನೀಡಿ, ‌ಬಹಳ ಪ್ರಮುಖವಾಗಿ ಬರುವ ವರ್ಷದಿಂದ ಕುಡಿಯುವ ನೀರಿನ‌ ಸಮಸ್ಯೆ ಉಂಟಾಗದಂತೆ ಬೇಕಾದ ಕ್ರಮಗಳನ್ನು ನಾವು ಮಾಡಬೇಕಾಗಿದೆ. ಪ್ರತಿ ಗ್ರಾ.ಪಂ.ನವರು ಈ ಕಾರ್ಯಕ್ರಮ ಕ್ಕೆ ಕೈಜೋಡಿಸಬೇಕು ಎಂದರು.

ವೇದಿಕೆಯಲ್ಲಿ ಗ್ರಾ.ಪಂ.ಅಧ್ಯಕ್ಷ ಹರೀಶ್ ಶೆಟ್ಟಿ ಪಡು, ತಾ.ಪಂ.ಸದಸ್ಯೆ ಮಲ್ಲಿಕಾ ವಿ.ಶೆಟ್ಟಿ ಉಪಾಧ್ಯಕ್ಷ ಯಶೋಧ, ಗ್ರಾ.ಪಂ.ಸದಸ್ಯ ರಾದ ಶೇಖರ್ ಶೆಟ್ಟಿ, ಬಬಿತಾ ಕೋಟ್ಯಾನ್, ಚೇತನಾ, ಪೂರ್ಣಿಮಾ, ಶ್ರೀಮತಿ ಶೆಟ್ಟಿ, ಐರಿನ್ ಡಿಸೋಜ, ಮೋಹಿನಿ, ವಿಶ್ವನಾಥ, ದೇವದಾಸ್, ಚಂದ್ರಾವತಿ ನಾಯ್ಕ, ಸುನಿಲ್ ಕೆ., ಸುರೇಂದ್ರ, ಸುಧಾಕರ ಶೆಟ್ಟಿ, ರತಿ ಭಂಡಾರಿ,

ಪಿ.ಡಿ.ಒ. ಮಹಮ್ಮದ್ ಬಿ.ಕಂದಾಯ ಅಧಿಕಾರಿ ನವೀನ್ ,ಗ್ರಾಮ ಕರಣೀಕ ರಾದ ಶಶಿ ಕುಮಾರ್, ಅಮೃತಾಂಶಿ, ಸಿ.ಡಿ.ಪಿ.ಒ.ಗಾಯತ್ರಿ ಬಾಯಿ , ಪಂ.ಕಾರ್ಯದರ್ಶಿ ಲಕ್ಮೀನಾರಾಯಣ ಕೆ.

ಬಿಜೆಪಿ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ದೇವದಾಸ ಶೆಟ್ಟಿ, ರಾಮ್ ದಾಸ ಬಂಟ್ವಾಳ,ಶ್ರೀ ಕಾಂತ ಶೆಟ್ಟಿ ಸಜೀಪ, ಸೀತಾರಾಮ ಪೂಜಾರಿ, ರಮಾನಾಥ ರಾಯಿ, ಪುರುಷೋತ್ತಮ ವಾಮದಪದವು, ನಂದರಾಮ್ ರೈ, ಪ್ರದೀಪ್ ಅಜ್ಜಿಬೆಟ್ಟು, ಸುದರ್ಶನ ಬಜ, ಗಣೇಶ್ ರೈ ಮಾಣಿ, ಮತ್ತಿತರರು ಉಪಸ್ಥಿತರಿದ್ದರು.
ಗ್ರಾ.ಪಂ.ಅಧ್ಯಕ್ಷ ಹರೀಶ್ ಶೆಟ್ಟಿ ಪಡು ಸ್ವಾಗತಿಸಿದರು.
ಪಿ.ಡಿಒ ಮಹಮ್ಮದ್ ವಂದಿಸಿ , ಕಾರ್ಯಕ್ರಮ ನಿರೂಪಿಸಿದರು

 

More from the blog

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...