Friday, June 27, 2025

ಆಷಾಢ ಮುಗಿದ ತತ್‍ಕ್ಷಣ ಬಿ.ಸಿ.ರೋಡ್ ನಗರ ಸುಂದರೀಕರಣ ಯೋಜನೆಗೆ ಚಾಲನೆ: ಶಾಸಕ ರಾಜೇಶ್ ನಾೈಕ್

ಬಂಟ್ವಾಳ, ಜು. 6: ಬಂಟ್ವಾಳ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಪ್ರಸ್ತುತ ಬಿ.ಸಿ.ರೋಡ್ ನಗರ ಸುಂದರೀಕರಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಬಿ.ಸಿ.ರೋಡಿನ ನಾರಾಯಣಗುರು ವೃತ್ತದಿಂದ ಕೈಕಂಬದ ವರೆಗಿನ 15 ಕೋ.ರೂ.ಗಳ ಕಾಮಗಾರಿಗೆ ಆಷಾಢ ಮುಗಿದ ತತ್‍ಕ್ಷಣ ಚಾಲನೆ ನೀಡಲಾಗುವುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಉಳಿಪ್ಪಾಡಿ ಹೇಳಿದರು.


ದ.ಕ.ಸಂಸದ ನಳಿನ್‍ಕುಮಾರ್ ಕಟೀಲು ಅವರ ಸಮ್ಮುಖದಲ್ಲಿ ಶನಿವಾರ ಮಂಗಳೂರಿನಲ್ಲಿ ಬಿ.ಸಿ.ರೋಡ್ ನಗರ ಸುಂದರೀಕರಣದ ಸಮಾಲೋಚನಾ ಸಭೆಯ ಕುರಿತು ಬಂಟ್ವಾಳದ ತಮ್ಮ ಕಚೇರಿಯಲ್ಲಿ ಪತ್ರಕರ್ತರಿಗೆ ಮಾಹಿತಿ ನೀಡಿದರು.
ವಿನ್ಯಾಸಕ ಎಂಜಿನಿಯರ್ ಧರ್ಮರಾಜ್ ಅವರು ಸುಂದರೀಕರಣದ ಕುರಿತು ಯೋಜನೆ ರೂಪಿಸುತ್ತಿದ್ದು, ಬಹುತೇಕ ಕಾಮಗಾರಿಗಳಿಗೆ ಪ್ರಾಯೋಜಕರು ಮುಂದೆ ಬಂದಿದ್ದಾರೆ. ಮಂಗಳೂರಿನ ಸಭೆಯಲ್ಲಿ ಹೆದ್ದಾರಿ ಎಂಜಿನಿಯರ್‍ಗಳು ಸಹಿತ ಸಾಕಷ್ಟು ಮಂದಿ ಉಪಸ್ಥಿತರಿದ್ದು, ತಮ್ಮ ಸಲಹೆಗಳನ್ನು ನೀಡಿದ್ದಾರೆ.
ಗಣ್ಯರ ಸಮಿತಿ ರಚನೆ
ಬಿ.ಸಿ.ರೋಡು ಸುಂದರೀಕರಣದ ಜತೆಗೆ ಬಂಟ್ವಾಳ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಮುಂದೆ ಬಂಟ್ವಾಳದ ಗಣ್ಯರ ಸಮಿತಿಯೊಂದನ್ನು ರಚಿಸಿಕೊಂಡು ಅವರ ಸಲಹೆ ಪಡೆಯುವ ಯೋಚನೆಯೂ ಇದೆ. ಮುಂದಿನ ದಿನಗಳಲ್ಲಿ ಸಮಿತಿಯ ಹೆಸರನ್ನು ಪ್ರಕಟಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್, ಬಿ.ದೇವದಾಸ್ ಶೆಟ್ಟಿ, ದೇವಪ್ಪ ಕರ್ಕೇರ ಉಪಸ್ಥಿತರಿದ್ದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...