ಬಂಟ್ವಾಳ: ಕೊರೊನಾ ವೈರಸ್ ಮುನ್ನೆಚ್ಚರಿಕೆಯಾಗಿ ಗ್ರಾಮೀಣ ಭಾಗಗಳಲ್ಲಿ ರಚನೆಗೊಂಡಿರುವ ಟಾರ್ಸ್ಪೋರ್ಸ್ ಸಮಿತಿಗಳ ಕಾರ್ಯವೈಖರಿ ಪರಿಶೀಲಿಸುವ ನಿಟ್ಟಿನಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗುರುವಾರ ತಾಲೂಕಿನ ಮೂರು ಗ್ರಾ.ಪಂ.ಗಳಲ್ಲಿ ಸಭೆ ನಡೆಸಿದರು.
ತಾಲೂಕಿನ ಬಡಗಬೆಳ್ಳೂರು, ಅಮ್ಮುಂಜೆ ಹಾಗೂ ಕರಿಯಂಗಳ ಗ್ರಾ.ಪಂ.ಗಳಿಗೆ ಭೇಟಿ ನೀಡಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜತೆ ಚರ್ಚಿಸಿದರು.



ಗ್ರಾ.ಪಂ.ವ್ಯಾಪ್ತಿಯಲ್ಲಿ ವಿತರಣೆಯಾಗಿರುವ ಪಡಿತರ ಅಕ್ಕಿ ಹಾಗೂ ಹೋಮ್ ಕ್ವಾರಂಟೈನ್ನಲ್ಲಿರುವವರ ಕುರಿತು ಶಾಸಕರು ಮಾಹಿತಿ ಪಡೆದರು.

ಸಭೆಯಲ್ಲಿ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸದಸ್ಯ ಯಶವಂತ ಪೊಳಲಿ, ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಬಡಗಬೆಳ್ಳೂರು ಗ್ರಾ.ಪಂ.ಅಧ್ಯಕ್ಷೆ ಜಯಂತಿ, ಅಮ್ಮುಂಜೆ ಗ್ರಾ.ಪಂ.ಅಧ್ಯಕ್ಷೆ ಪ್ರೇಮಲತಾ, ಕರಿಯಂಗಳ ಗ್ರಾ.ಪಂ.ಅಧ್ಯಕ್ಷೆ ಚಂದ್ರಾವತಿ, ಶಾಸಕ ಆಪ್ತ ಕಾರ್ಯದರ್ಶಿ ದಿನೇಶ್, ಗ್ರಾ.ಪಂ.ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ಆರೋಗ್ಯ ಇಲಾಖೆಯವರು, ಆಶಾ ಕಾರ್ಯಕರ್ತೆಯರು, ನ್ಯಾಯಬೆಲೆ ಅಂಗಡಿಯವರು ಮೊದಲಾದವರಿದ್ದರು.












