Friday, June 27, 2025

ಛಾಯಾಗ್ರಾಹಕರಿಗೆ ಕಿಟ್ ವಿತರಣೆ

ಬಂಟ್ವಾಳ: ಕೊರೊನಾ ಲಾಕ್ ಡೌನ್ ನಿಂದ ಕಂಗೆಟ್ಟಿರುವ ಬಂಟ್ವಾಳ ತಾಲೂಕಿನ ಛಾಯಾಗ್ರಾಹಕರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಬಂಟ್ವಾಳ ವಲಯ ಛಾಯಾಗ್ರಾಹಕರ ಸಂಘದ ಹಾಗೂ ಟ್ರಸ್ಟ್ ‌ನ ವತಿಯಿಂದ ಸುಮಾರು 150 ಮಂದಿ ಸದಸ್ಯರಿಗೆ 1 ಲಕ್ಷ ರೂ.ಮೌಲ್ಯದ ದಿನ ಬಳಕೆಯ ಆಹಾರದ ಕಿಟ್ ನ್ನು ನೀಡಲಾಯಿತು.


ಲಾಕ್ ಡೌನ್ ನಿಂದಾಗಿ ಛಾಯಾಗ್ರಾಹಕರ ಸೀಸನ್ ತಿಂಗಳಾಗಿರುವ ಎಪ್ರಿಲ್ ಮತ್ತು ಮೇ ಯಲ್ಲಿ ಮುಂಗಡ ಕಾಯ್ದಿರಿಸಿದ ಮದುವೆ ಕಾರ್ಯಕ್ರಮಗಳು ಎಲ್ಲವೂ ರದ್ದುಗೊಂಡಿದೆ. ಹೀಗಾಗಿ ಛಾಯಾಗ್ರಾಹಕರು ಸಂಕಷ್ಟದಲ್ಲಿದ್ದಾರೆ.

ಈ ಸಂದರ್ಭದಲ್ಲಿ ವಲಯ ಛಾಯಾಗ್ರಾಹಕರ ಸಂಘದ ವಲಯ ಅಧ್ಯಕ್ಷ ಕುಮಾರಸ್ವಾಮಿ ಕನ್ಯಾನ, ಕಾರ್ಯದರ್ಶಿ ವಿಕೇಶ್ ಬಂಟ್ವಾಳ, ಛಾಯಾಕ್ಷೇಮ ಚಾರಿಟೇಬಲ್ ಟ್ರಸ್ಟ್ ನ ಸಂಚಾಲಕ ಆನಂದ ಎನ್. ಹಾಗೂ ವಲಯದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...