ಬಂಟ್ವಾಳ: ತಾಲೂಕಿನ ಸಾಲೆತ್ತೂರು ಗ್ರಾಮದ ಬಡ ಜನರಿಗೆ ಆಹಾರ ಕಿಟ್ ವಿತರಿಸಿದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು.


ಕೋವಿಡ್ -19 ನಿಂದ ಲಾಕ್ ಡೌನ್ ಆದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿದೆ. ಬಡವರು ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಕೈ ಚೆಲ್ಲಿ ಕುಳಿತಿದ್ದಾರೆ. ಇಂತಹ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ತಮ್ಮ ಕ್ಷೇತ್ರದ ಸಾಲೆತ್ತೂರು ಗ್ರಾಮದ ಹಲವೆಡೆ ಅಕ್ಕಿ, ಉಪ್ಪು ಸೇರಿದಂತೆ ಅಗತ್ಯವಸ್ತುಗಳ ಕಿಟ್ ವಿತರಣೆ ಮಾಡಿದ್ದಾರೆ. ಬಡವರ ಹಸಿವು ನೀಗಿಸಿದ ರಾಜೇಶ್ ನಾಯ್ಕ್ ಅವರ ಕಾರ್ಯ ಶ್ಲಾಘನೀಯವಾಗಿದೆ.












